Advertisement
MIRROR FOCUS

ಕೃಷಿಯಲ್ಲಿ ಶ್ರಮ ಉಳಿತಾಯ ಮಾಡುವ ಸುಲಭ ಉಪಾಯ | ತಾಂತ್ರಿಕ ಐಡಿಯಾದ ಯುವ ಕೃಷಿಕರೇ ಈಗ ಕೃಷಿಗೆ ಬೇಕಿದೆ |

Share

ಕೃಷಿಯಲ್ಲಿ ಈಗ ಶ್ರಮ ಉಳಿತಾಯವಾಗಬೇಕು, ಈ ಮೂಲಕ ಕೃಷಿ ಆದಾಯವೂ ಉಳಿತಾಯವಾಗಬೇಕು, ಪ್ರಧಾನಿಗಳು ಹೇಳಿದ ಕೃಷಿ ಆದಾಯದ ದ್ವಿಗುಣದ ದಾರಿಯೂ ಸುಲಭ ಆಗಬೇಕು. ಕೃಷಿಯಲ್ಲಿನ ಹಲವು ಸಮಸ್ಯೆಗಳ ನಿವಾರಣೆಗೆ ತಾಂತ್ರಿಕ ವಿಧಾನಗಳ ಬಳಕೆಯೂ ಇಂದು ಅಗತ್ಯವಾಗಿದೆ. ಇದಕ್ಕೆ ಯುವಕರ ವಿನೂತನ ಟೆಕ್ನಿಕಲ್ ಐಡಿಯಾಗಳೂ ಕಾರಣವಾಗುತ್ತದೆ.ಇಂತಹದ್ದೊಂದು ಐಡಿಯಾವನ್ನು ಯುವಕ ಉಣ್ಣಿಕೃಷ್ಣನ್ ಮಾಡಿದ್ದಾರೆ.‌ ಹಲವು ಕೃಷಿಕರಿಗೆ ಈ ಐಡಿಯಾ ಮೆಚ್ಚುಗೆಯೂ ಆಗಿದೆ.

ಸರಕಾರ ಕೃಷಿ ಉಳಿಸಲು ಇನ್ನಿಲ್ಲದ ಸರಕಾರ ನೀಡುತ್ತಿದೆ. ಬಡ್ಡಿ ರಹಿತ ಸಾಲದಿಂದ ತೊಡಗಿ ಕೃಷಿ ಬೆಳವಣಿಗೆಗೆ ಏನೆಲ್ಲಾ ಮಾಡಬಹುದೋ ಅದನ್ನೆಲ್ಲಾ ಮಾಡುತ್ತಿದೆ. ಹಾಗಿದ್ದರೂ ದೇಶದಲ್ಲಿ ಕೃಷಿಯಲ್ಲಿ ಭಾರೀ ಪ್ರಗತಿ ಕಾಣುತ್ತಿಲ್ಲ. ಇದಕ್ಕೆ ಹಲವು ಕಾರಣಗಳು ಇದ್ದರೂ, ತಾಂತ್ರಿಕ ಐಡಿಯಾ ಹೊಂದಿದ ಹಾಗೂ ಉತ್ಸಾಹದ ಯುವ ಕೃಷಿಕರು ಮಣ್ಣಿನ ಆರಾಧನೆಗೆ ಇಳಿಯದೇ ಇರುವುದೂ ಒಂದು ಕಾರಣ. ಹಾಗಿದ್ದರೂ ಈಗಾಗಲೇ ಕೃಷಿಯಲ್ಲಿ  ತೊಡಗಿಸಿಕೊಂಡಿರುವ ಕೆಲವು ಯುವ ಕೃಷಿಕರು ಉನ್ನತ ವ್ಯಾಸಾಂಗ ಮಾಡಿ ಹೊಸ ಹೊಸ ವಿಧಾನದ ಮೂಲಕ ಕೃಷಿ ಮಾಡುತ್ತಿದ್ದಾರೆ. ಈ ಮೂಲಕ ಕೃಷಿ ಬೆಳವಣಿಗೆಗೂ ಕಾರಣವಾಗುತ್ತಿದ್ದಾರೆ.

ಇದೀಗ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಉಣ್ಣಿಕೃಷ್ಣನ್‌ ಎಂಬ ಯುವಕ ಅವರ ಕೃಷಿ ಭೂಮಿಯಲ್ಲಿ  ವಿವಿಧ ರೀತಿಯಲ್ಲಿ  ತಾಂತ್ರಿಕ ವಿಧಾನವನ್ನು  ಅಳವಡಿಸಿಕೊಂಡಿದ್ದಾರೆ. ಅಡಿಕೆ ಹಾಗೂ ರಬ್ಬರ್‌ ಬೆಳೆಯುವ ಇವರು  ರಬ್ಬರ್‌ ಕೃಷಿಯಲ್ಲೂ ತಾಂತ್ರಿಕ ವಿಧಾನ ಬಳಕೆ ಮಾಡಿದರೆ, ಅಡಿಕೆ ಕೃಷಿಯಲ್ಲೂ ತಾಂತ್ರಿಕವಾಗಿಯೇ ಕೆಲಸ ಮಾಡುತ್ತಿದ್ದಾರೆ. ಈಗ ಬ್ರೆಶ್‌ ಕಟ್ಟರ್‌ ಮೂಲಕ ಕೆರೆಯಿಂದ ನೀರೆಳೆಯುವ ಪ್ರಯತ್ನ ಮಾಡಿದ್ದಾರೆ. ಒಂದೇ ಯಂತ್ರದ ಮೂಲಕ ವಿವಿಧ ಕೆಲಸಗಳು ಆಗಬೇಕು ಎನ್ನುವ ಯೋಚನೆಯಿಂದ ಪ್ರಯತ್ನ ಮಾಡುತ್ತಿರುವ ಉಣ್ಣಿಕೃಷ್ಣನ್‌, ಅಡಿಕೆ ತೋಟಕ್ಕೆ ಬೋರ್ಡೋ ಸಿಂಪಡಣೆಯ ಸಂದರ್ಭ ನೀರು ಅಗತ್ಯವಾಗಿದೆ, ಇದಕ್ಕೆ ಆನ್‌ ಲೈನ್‌ ಮೂಲಕ ಯಂತ್ರವನ್ನು  ಹುಡುಕಿ ಅದನ್ನು ತರಿಸಿ  ಬ್ರೆಶ್‌ ಕಟ್ಟರ್‌ ಗೆ ಅಳವಡಿಕೆ ಮಾಡಿದ್ದಾರೆ. ಈ ಮೂಲಕ ಹೊಸದೊಂದು ಪ್ರಯೋಗ ಮಾಡಿ ಯಶಸ್ಸು ಕಂಡಿದ್ದಾರೆ. ಎರಡು ನಿಮಿಷದ ಒಳಗೆ 200 ಲೀಟರ್‌ ನೀರನ್ನು  ತುಂಬಿಸಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಉಣ್ಣಿಕೃಷ್ಣನ್.‌ ಯುವಕರ ಇಂತಹ ವಿನೂತನ ಯೋಚನೆಗಳು ಕೃಷಿಕರಿಂದಲೂ ಬೆಂಬಲ ದೊರೆಯುತ್ತಿರುವುದು  ಆಶಾದಾಯಕ ಬೆಳವಣಿಗೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

21 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago