Advertisement
MIRROR FOCUS

ಉಪಯೋಗಿಸಿ ನೋಡಿ ಕೋಳಿ ಗೊಬ್ಬರ | ಹೊಲದಲ್ಲಿ ಬೆಳೆಗಳ ಅಬ್ಬರ..! | ಒಂದಷ್ಟು ನಕಾರಾತ್ಮಕ ಅಂಶಗಳು ಇವೆ..! ಎಚ್ಚರ…

Share

ಅತಿಯಾದ ರಾಸಾಯನಿಕ ಗೊಬ್ಬರಗಳ(Chemical Fertilizer) ಬಳಕೆಯಿಂದ ಮಣ್ಣಿನ ಫಲವತ್ತತೆ(Soil fertility) ಹಾಳಾಗಿದ್ದಲ್ಲದೆ ನಾವು ಸೇವಿಸುವ ಆಹಾರ ಕಲುಷಿತಗೊಂಡಿದೆ(Contaminated food). ಇಂತಹ ವಿಷಯಗಳನ್ನು ಅರಿತ ಕೆಲವು ರೈತರು(Farmer) ಸಾವಯವ ಗೊಬ್ಬರಗಳಾದ(Organic fertilizer) ಕೊಟ್ಟಿಗೆ ಗೊಬ್ಬರ(Cow Manure), ಆಡು/ಕುರಿ ಗೊಬ್ಬರ(Goat/Sheep Manure), ಎರೆಹುಳು ಗೊಬ್ಬರ(Earthworm Manure), ಹಂದಿ ಗೊಬ್ಬರ(Pig Manure) ಮತ್ತು ಕೋಳಿ ಗೊಬ್ಬರವನ್ನು(Poultry Manure) ಬಳಸಿ ಕೃಷಿ(Agriculture) ಮಾಡುತ್ತಿದ್ದಾರೆ.

ಬೇರೆ ಸಾವಯವ ಗೊಬ್ಬರಗಳಿಗೆ ಹೋಲಿಸಿದರೆ ಕೋಳಿ ಗೊಬ್ಬರದಲ್ಲಿ ಹೆಚ್ಚು ಸಾರಜನಕ, ರಂಜಕ ಮತ್ತು ಪೊಟ್ಯಾಷ್(Nitrogen, Phosphorus, Potash)ಸಿಗುತ್ತವೆ ಆದ್ದರಿಂದಲೇ ಕೋಳಿ ಹಿಕ್ಕಿಯನ್ನು ರೈತರು ಬೆಳೆಗಳಿಗೆ ಗೊಬ್ಬರಗಳಾಗಿ ಬಳಸುತ್ತಾರೆ. ಇತ್ತಿಚೆಗೆ ಕೋಳಿ ಸಾಕಾಣಿಕೆ ಒಂದು ಉದ್ಯಮವಾಗಿದೆ ಅನೇಕ ರೈತರು ಮಾಂಸ ಮತ್ತು ಮೊಟ್ಟೆ ಉತ್ಪಾದನೆಯ ಉದ್ದೇಶದಿಂದ ಕೋಳಿಗಳನ್ನು ಸಾಕುತ್ತಾರೆ. ಜೊತೆ ಜೊತೆಗೆ ಕೋಳಿ ಗೊಬ್ಬರವನ್ನು ಮಾರಾಟ ಮಾಡಿ ಹಣ ಗಳಿಸುತ್ತಾರೆ.

ಕೃಷಿಯಲ್ಲಿ ರೈತರು ಕೋಳಿ ಗೊಬ್ಬರವನ್ನು ಬಳಸಿದರೆ ಹೆಚ್ಚಿನ ಇಳುವರಿ ಪಡೆಯುವ ಜೊತೆಗೆ ರಾಸಾಯನಿಕ ಗೊಬ್ಬರಗಳ ಬಳಕೆಯನ್ನು ಕಡಿಮೆ ಮಾಡಬಹುದು. ಕೋಳಿ ಸಾಕಾಣಿಕಾ ಕೇಂದ್ರದಿಂದ ತಂದ ಗೊಬ್ಬರವನ್ನು ರೈತರು ನೇರವಾಗಿ ಬೆಳೆಗಳಿಗೆ ಬಳಸಬಾರದು. ಕೆಲ ದಿನಗಳ ತನಕ ತೇವಾಂಶ ಇರುವ ಸ್ಥಳದಲ್ಲಿ ಸಂಗ್ರಹಿಸಿ ಉಪಯೋಗಿಸಬೇಕು. ಹೆಚ್ಚು ತೇವಾಂಶ ಇರುವ ಅಂದರೆ ಮಳೆಗಾಲದ ಸಮಯದಲ್ಲಿ ಈ ಗೊಬ್ಬರ ಬೆಳೆಸಿದರೆ ಇನ್ನು ಸೂಕ್ತ.

ಆದರೆ ಕೆಲ ರೈತರ ಅನುಭವದ ಪ್ರಕಾರ ಕೋಳಿ ಗೊಬ್ಬರದ ಬಗ್ಗೆ ಒಂದಷ್ಟು ನಕಾರಾತ್ಮಕ ಆಲೋಚನೆಗಳು ಇವೆ. ಹಾಗಾಗಿ ಕೋಳಿ ಗೊಬ್ಬರ ಒಳ್ಳೆಯದು ಹೌದೋ ಅಲ್ಲವೋ ಎಂಬ ಬಗ್ಗೆ ರೈತರೇ ವಿಮರ್ಷೆ ಮಾಡಬೇಕು, ಗೊಬ್ಬರದಿಂದ ಕೃಷಿ ಹಾಳಾಗಿದೆಯೆಂದು ಕೆಲ ರೈತರು ಹೇಳುವುದು ಇದೆ. ಯಾವುದೇ ಬಾಹ್ಯ ಪರಿಕರಗಳು ಕೃಷಿ ಕಾರ್ಯಗಳಲ್ಲಿ ಬಳಸುವುದು ಈಗ ಬಹಳ ಅಪಾಯಕಾರಿ ಮತ್ತು ಹಲವು ರೋಗಗಳಿಗೆ ನಾವೇ ಆಹ್ವಾನ ನೀಡಿದಂತೆ. ಕೋಳಿ ಗೊಬ್ಬರದಲ್ಲಿ ಸೇರಿರುವ ವಿನಾಶಕಾರಿ, ಪ್ರಚೋದನಕಾರಿ ಔಷಧಿಗಳು ಕೃಷಿ ಭೂಮಿಯಲ್ಲಿ ಸೇರಿ, ಮುಂದೆ ಕುಡಿಯುವ ನೀರು ಕೂಡಾ ಕಲ್ಮಶವಾಗುತ್ತದೆ. ಮಾರಣಾಂತಿಕ ಕಾಯಿಲೆಗಳು ಪ್ರಾರಂಭ ಆಗಲು ಇವುಗಳು ಬೀಜಾಂಕುರ ಆಗಿರುತ್ತದೆ. ಕೋಳಿ ಗೊಬ್ಬರ ಅಧಿಕ ಉಪಯೋಗ ಅಡಿಕೆ ಮರಗಳು ಹೆಚ್ಚು ಟೊಳ್ಳಾಗುತ್ತದೆ. ಪ್ರಕೃತಿ ವಿಕೋಪದಲ್ಲಿ ಬೇಗನೆ ಮುರಿದು ಬೀಳುತ್ತವೆ. ಹಾಗೆ ಕೋಳಿ ಗೊಬ್ಬರ ತುಂಬಾ ಹೀಟ್ ಅನ್ನೋ ಬಗ್ಗೆ ಕೆಲ ರೈತರ ಅಭಿಪ್ರಾಯವಿದೆ. ಯಾವುದಕ್ಕೂ ಒಂದಷ್ಟು ಪ್ರಯೋಗ, ಅಥವಾ ಈಗಾಗಲೇ ಬಳಸಿದ ರೈತರ ಸಲಹೆ ಪಡೆಯುವುದು ಉತ್ತಮ.

ಮಾಹಿತಿ ಮೂಲ : ಡಿಜಿಟಲ್‌ ಮೀಡಿಯಾ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

3 hours ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

4 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

15 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago