ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೂ ಆ ಬಗ್ಗೆ ಕೆಲವೇ ಗಂಟೆಗಳಲ್ಲಿ ಮಾಹಿತಿ ನೀಡುವ ದೂರಸಂವೇದಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.
ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾಡ್ಗಿಚ್ಚು ತಡೆ – ನಿಯಂತ್ರಣಕ್ಕೆ ಸಿದ್ಧತೆ ಕುರಿತಂತೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ. ಬೆಂಕಿ ಕಾಣಿಸಿಕೊಂಡ ಮಾಹಿತಿ ಸಕಾಲದಲ್ಲಿ ಲಭ್ಯವಾದರೆ, ಕಾಡಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯಬಹುದು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಕಾಡ್ಗಿಚ್ಚು ತಡೆಯಲು ಮತ್ತು ನಿಯಂತ್ರಿಸಲು ಸಚಿವರು ಸೂಚನೆ ನೀಡಿದರು.
ರಾಜ್ಯದ ಕೆಲವು ಅರಣ್ಯಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಪದೇಪದೆ ಕಾಡ್ಗಿಚ್ಚು ಸಂಭವಿಸುತ್ತಿರುವುದನ್ನು 15 ವರ್ಷಗಳ ದತ್ತಾಂಶದಿಂದ ಕ್ರೋಡೀಕರಿಸಿದ್ದು, ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ, ಈ ಪ್ರದೇಶಗಳಲ್ಲಿ ಹೆಚ್ಚಿನ ಅಗ್ನಿ ವೀಕ್ಷಕರನ್ನು (ಫೈರ್ ವಾಚರ್ಸ್) ನಿಯೋಜಿಸಲು ಮತ್ತು ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲು ಇಡುವಂತೆ ಸಚಿವ ಖಂಡ್ರೆ ಸೂಚಿಸಿದರು.
ಕೆಲವು ಕಡೆಗಳಲ್ಲಿ ಉದ್ದೇಶಪೂರ್ವಕವಾಗಿ ಕೆಲವು ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವುದೂ ಬೆಳಕಿಗೆ ಬಂದಿದ್ದು, ಇಂತಹ ವಿದ್ರೋಹಿಗಳ ಮತ್ತು ಸಂಚುಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…