Advertisement
MIRROR FOCUS

ಕಾಡಿನ ಬೆಂಕಿ ಪತ್ತೆಗೆ ದೂರಸಂವೇದಿ ತಂತ್ರಜ್ಞಾನದ ಬಳಕೆ | ಕಾಡ್ಗಿಚ್ಚು ನಿಗ್ರಹಕ್ಕೆ ಕಟ್ಟೆಚ್ಚರ ವಹಿಸಲು ಇಲಾಖೆಗೆ ಸೂಚನೆ |

Share

ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೂ ಆ ಬಗ್ಗೆ ಕೆಲವೇ ಗಂಟೆಗಳಲ್ಲಿ ಮಾಹಿತಿ ನೀಡುವ ದೂರಸಂವೇದಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.

ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾಡ್ಗಿಚ್ಚು ತಡೆ – ನಿಯಂತ್ರಣಕ್ಕೆ ಸಿದ್ಧತೆ ಕುರಿತಂತೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ. ಬೆಂಕಿ ಕಾಣಿಸಿಕೊಂಡ ಮಾಹಿತಿ ಸಕಾಲದಲ್ಲಿ ಲಭ್ಯವಾದರೆ, ಕಾಡಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯಬಹುದು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಕಾಡ್ಗಿಚ್ಚು ತಡೆಯಲು ಮತ್ತು ನಿಯಂತ್ರಿಸಲು  ಸಚಿವರು ಸೂಚನೆ ನೀಡಿದರು.

ರಾಜ್ಯದ ಕೆಲವು ಅರಣ್ಯಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಪದೇಪದೆ ಕಾಡ್ಗಿಚ್ಚು ಸಂಭವಿಸುತ್ತಿರುವುದನ್ನು 15 ವರ್ಷಗಳ ದತ್ತಾಂಶದಿಂದ ಕ್ರೋಡೀಕರಿಸಿದ್ದು, ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ, ಈ ಪ್ರದೇಶಗಳಲ್ಲಿ ಹೆಚ್ಚಿನ ಅಗ್ನಿ ವೀಕ್ಷಕರನ್ನು (ಫೈರ್ ವಾಚರ್ಸ್) ನಿಯೋಜಿಸಲು ಮತ್ತು ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲು ಇಡುವಂತೆ ಸಚಿವ ಖಂಡ್ರೆ  ಸೂಚಿಸಿದರು.

ಕೆಲವು ಕಡೆಗಳಲ್ಲಿ ಉದ್ದೇಶಪೂರ್ವಕವಾಗಿ ಕೆಲವು ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವುದೂ ಬೆಳಕಿಗೆ ಬಂದಿದ್ದು, ಇಂತಹ ವಿದ್ರೋಹಿಗಳ ಮತ್ತು ಸಂಚುಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

14 minutes ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

29 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

14 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago