Advertisement
ಸುದ್ದಿಗಳು

ಕೆಮಿಕಲ್ ಹೇರ್ ಡೈಗೆ ಹೇಳಿ ಟಾಟಾ: ಬಳಸಿ ನೈಸರ್ಗಿಕ ನೀಲಿ ಸೊಪ್ಪು

Share

ನೀಲಿ ಸೊಪ್ಪು (ಇಂಡಿಗೋ)
ನಮ್ಮ ವಾಡಿಕೆಯಲ್ಲಿ ನೀಲಿ ಸೊಪ್ಪು ಎನ್ನುವುದಕ್ಕಿಂತ ಇಂಡಿಗೋ ಎಂದರೆ ಜನರಿಗೆ ಬೇಗನೆ ಅರ್ಥವಾಗುತ್ತದೆ.
ಇದನ್ನು ಸಾಧಾರಣವಾಗಿ ಕೂದಲಿನ ಬಣ್ಣ ಬರಿಸಲು ಹಿಂದೆ ಶಾಯಿ ಎಂದರೆ ಇಂಕ್ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ. ಈಗ ಇವೆರಡಕ್ಕೂ ಕೆಮಿಕಲ್ ಪ್ರವೇಶ ಆಗಿದೆ.
ಈಗಲೂ ನಾವು ಮನಸ್ಸು ಮಾಡಿದರೆ ಕೆಮಿಕಲ್ ಮುಕ್ತವಾಗಿ ಕೂದಲನ್ನು ಕಪ್ಪಾಗಿಸಬಹುದು.
ಇದಕ್ಕೆ ಪ್ರಮುಖ ಪಾತ್ರ ನೀಲಿ ಸೊಪ್ಪು ವಹಿಸುತ್ತದೆ ಬಣ್ಣ ಹಸಿರಾಗಿದ್ದರು ಸೊಪ್ಪನ್ನು ರುಬ್ಬಿದಾಗ ನೀಲಿ ಬಣ್ಣಕ್ಕೆ ತಿರುಗುತ್ತದೆ. ಹೂ ಗಾಢವಾದ ಗುಲಾಬಿ ಬಣ್ಣವನ್ನು ಹೋಲುತ್ತದೆ.
ನೋಡುವುದಕ್ಕೆ ಇದೇ ರೀತಿಯ ಗಿಡಗಳು ಇದೇ ಪ್ರಭೇದಕ್ಕೆ ಸೇರಿದ್ದು ಇರುತ್ತದೆ ಹಾಗಾಗಿ ಸರಿಯಾಗಿ ಮಾಹಿತಿಯನ್ನು ತಿಳಿದು ಇದನ್ನು ಉಪಯೋಗಿಸುವುದು ಒಳ್ಳೆಯದು.
ಹೊರಗಡೆ ಹಚ್ಚುವಾಗ ಸ್ವಲ್ಪ ಹೆಚ್ಚು ಕಡಿಮೆ ಆದರೂ ಪರವಾಗಿಲ್ಲ ಹೊಟ್ಟೆಗೆ ತೆಗೆದುಕೊಳ್ಳುವಾಗ ಮಾತ್ರ ಮಾಹಿತಿ ಇದ್ದವರಲ್ಲಿ ಸಂಗ್ರಹಿಸಿ ತೆಗೆದುಕೊಳ್ಳಿ.
ಇದರ ಸೊಪ್ಪು ಬೇರು ಎಲೆ ಹೂವು ಕಾಂಡ ಎಲ್ಲವೂ ಉಪಯೋಗಕ್ಕೆ ಬರುತ್ತದೆ.
1) ಇದರ ಸೊಪ್ಪನ್ನು ಅರೆದು ಮೂಲವ್ಯಾಧಿ ಮೊಳಕೆಗೆ ಹಚ್ಚುವುದರಿಂದ ಗುಣವಾಗುತ್ತದೆ.
2) ನಾಭಿಯ ಕೆಳಗೆ ಸೊಪ್ಪಿನ ಪೇಸ್ಟನ್ನು ಹಚ್ಚುವುದರಿಂದ ಮೂತ್ರ ಕಟ್ಟು ಸಲ್ಲಿಸಾಗಿ ಹೊರ ಹೋಗುತ್ತದೆ.
3) ನೀಲಿಯ ಹಸಿಯಾದ ಸೊಪ್ಪನ್ನು ಅರೆದು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವುದು ಹೊಟ್ಟು ನಿವಾರಣೆ ಆಗುತ್ತದೆ ಮತ್ತು ಬಣ್ಣ ಬರುತ್ತದೆ.
4) ಪ್ರಮುಖವಾಗಿ ನೀಲಿ ಸೊಪ್ಪನ್ನು ಉಪಯೋಗಿಸಿ ಅಳಲೆ ಕಾಯಿ, ತಾರೆ ಕಾಯಿ, ನೆಲ್ಲಿಕಾಯಿ,ವಾಯುವಿಳಂಗ, ಒಂದೆಲಗ, ನೀಲಿ ಸೊಪ್ಪುಮದರಂಗಿ,ಹೊನಗನ್ನೆ, ಭೃಂಗರಾಜ ಸೊಪ್ಪು ಇಲಿ ಕಿವಿ ಸೊಪ್ಪು ವಿಳ್ಯದೆಲೆ ಕೆಂಪು ದಾಸವಾಳ ಹೂವು ಗರಗ ಸೊಪ್ಪು ನಾಮಧಾರಿ ಸೊಪ್ಪು, ಗಾಂಧಾರಿ ಸೊಪ್ಪು, ಕರಿಬೇವಿನ ಸೊಪ್ಪು, ಆಲದ ಮರದ ಬಿಳಲು, ಅಂತರ ಗಂಗೆ, ದಡಸಲು ಸೊಪ್ಪು,ಮಲ್ಲಿಗೆ ಹೂ, ಜಟಮಾಸಿ ಇವುಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಬಾಳೆಯ ದಿಂಡಿನ ಸರದಲ್ಲಿ ಪೇಸ್ಟ್ ಮಾಡಿ ಒಣಗಿಸಿ ಸೋಪು ಮತ್ತು ಎಣ್ಣೆಗೆ ಉಪಯೋಗಿಸುತ್ತೇನೆ.
ಅಗತ್ಯ ಇದ್ದವರು ಉಪಯೋಗ ಪಡೆಯಬಹುದು
5) ಸುಮಾರು ಎರಡು ಚಮಚದಷ್ಟು ರಸವನ್ನು ಅಷ್ಟೇ ಹಾಲಿನೊಂದಿಗೆ ಸೇರಿಸಿ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ಹುಚ್ಚುನಾಯಿ ಕಡಿತದ ವಿಷ ಗುಣವಾಗುತ್ತದೆ ಮತ್ತು ಕಚ್ಚಿದ ಜಾಗಕ್ಕೆ ಇದರ ಪೇಸ್ಟನ್ನು ಹಚ್ಚಬೇಕು ಕೆಲವರಿಗೆ ತಲೆನೋವು ಬರಬಹುದು ಭಯಪಡುವ ಅಗತ್ಯ ಇಲ್ಲ.
6) ಬೇರಿನ ನಯವಾದ ಪುಡಿಯನ್ನು ಹಲ್ಲಿನ ಒಳಗಡೆಗೆ ತುಂಬುವುದರಿಂದ ಹಲ್ಲು ನೋವು ನಿವಾರಣೆ ಆಗುತ್ತದೆ.
7) ನೀಲಿ ಸೊಪ್ಪಿನ ಪೇಸ್ಟನ್ನು ಹಚ್ಚುವುದರಿಂದ ಸರ್ಪ ಸುತ್ತು ಗುಣವಾಗುತ್ತದೆ.
8) ತಲೆಯಲ್ಲಿ ಆಗುವ ಜಿರಳೆ ಹುಣ್ಣಿಗೆ ಇದರ ಪೇಸ್ಟ್ ಒಳ್ಳೆಯ ಔಷಧಿ.
9) ಸೊಪ್ಪಿನ ಪೇಸ್ಟನ್ನು ಕೆಚ್ಚಲಿಗೆ ಹಚ್ಚುವುದರಿಂದ ಕೆಚ್ಚಲ ಬಾವು ನಿವಾರಣೆ ಯಾಗುತ್ತದೆ. ಇದು ತಲೆಮಾರಿನಿಂದ ಕೆಚ್ಚಲು ಬಾವಿಗೆ ಉಪಯೋಗಿಸಿಕೊಂಡು ಬಂದ ಔಷಧಿ.
10) ನೀಲಿ ಬೀಜವನ್ನು ಚೆನ್ನಾಗಿ ಅರೆದು ವಸ್ತ್ರಗಾಳಿದ ಚೂರ್ಣ ಮಾಡಿ ಕಣ್ಣಿಗೆ ಅಂಜನ ಇಡುವುದರಿಂದ ಕಣ್ಣಿನ ಪೊರೆ ನಿವಾರಣೆಯಾಗುತ್ತದೆ.
11) ಆಕಸ್ಮಿಕವಾಗಿ ಯಾವುದೇ ಕಬ್ಬಿಣ ಅಥವಾ ಇನ್ನಿತರೆ ಧಾತುಗಳು ದೇಹದಲ್ಲಿ ಸೇರಿಕೊಂಡಾಗ ಇದರ ಕಷಾಯವನ್ನು ಕುಡಿಯುತ್ತಾ ಬಂದರೆ ಅದು ನಿವಾರಣೆಯಾಗುತ್ತದೆ.
12) ಇದರ ಕಷಾಯ ಕುಡಿಯುತ್ತಾ ಬಂದರೆ ಚರ್ಮರೋಗ ನಿವಾರಣೆ ಆಗುತ್ತದೆ.
*ವಿಶೇಷ ಸೂಚನೆ*
13) ಹೊಟ್ಟೆಗೆ ತೆಗೆದುಕೊಳ್ಳುವಾಗ ಭೇದಿ ಆಗುವ ಸಾಧ್ಯತೆ ಹೆಚ್ಚು.

🥢 ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

25 minutes ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

14 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

15 hours ago