Advertisement
ಸುದ್ದಿಗಳು

ಕೆಮಿಕಲ್ ಹೇರ್ ಡೈಗೆ ಹೇಳಿ ಟಾಟಾ: ಬಳಸಿ ನೈಸರ್ಗಿಕ ನೀಲಿ ಸೊಪ್ಪು

Share

ನೀಲಿ ಸೊಪ್ಪು (ಇಂಡಿಗೋ)
ನಮ್ಮ ವಾಡಿಕೆಯಲ್ಲಿ ನೀಲಿ ಸೊಪ್ಪು ಎನ್ನುವುದಕ್ಕಿಂತ ಇಂಡಿಗೋ ಎಂದರೆ ಜನರಿಗೆ ಬೇಗನೆ ಅರ್ಥವಾಗುತ್ತದೆ.
ಇದನ್ನು ಸಾಧಾರಣವಾಗಿ ಕೂದಲಿನ ಬಣ್ಣ ಬರಿಸಲು ಹಿಂದೆ ಶಾಯಿ ಎಂದರೆ ಇಂಕ್ ತಯಾರಿಕೆಯಲ್ಲಿ ಉಪಯೋಗಿಸುತ್ತಾರೆ. ಈಗ ಇವೆರಡಕ್ಕೂ ಕೆಮಿಕಲ್ ಪ್ರವೇಶ ಆಗಿದೆ.
ಈಗಲೂ ನಾವು ಮನಸ್ಸು ಮಾಡಿದರೆ ಕೆಮಿಕಲ್ ಮುಕ್ತವಾಗಿ ಕೂದಲನ್ನು ಕಪ್ಪಾಗಿಸಬಹುದು.
ಇದಕ್ಕೆ ಪ್ರಮುಖ ಪಾತ್ರ ನೀಲಿ ಸೊಪ್ಪು ವಹಿಸುತ್ತದೆ ಬಣ್ಣ ಹಸಿರಾಗಿದ್ದರು ಸೊಪ್ಪನ್ನು ರುಬ್ಬಿದಾಗ ನೀಲಿ ಬಣ್ಣಕ್ಕೆ ತಿರುಗುತ್ತದೆ. ಹೂ ಗಾಢವಾದ ಗುಲಾಬಿ ಬಣ್ಣವನ್ನು ಹೋಲುತ್ತದೆ.
ನೋಡುವುದಕ್ಕೆ ಇದೇ ರೀತಿಯ ಗಿಡಗಳು ಇದೇ ಪ್ರಭೇದಕ್ಕೆ ಸೇರಿದ್ದು ಇರುತ್ತದೆ ಹಾಗಾಗಿ ಸರಿಯಾಗಿ ಮಾಹಿತಿಯನ್ನು ತಿಳಿದು ಇದನ್ನು ಉಪಯೋಗಿಸುವುದು ಒಳ್ಳೆಯದು.
ಹೊರಗಡೆ ಹಚ್ಚುವಾಗ ಸ್ವಲ್ಪ ಹೆಚ್ಚು ಕಡಿಮೆ ಆದರೂ ಪರವಾಗಿಲ್ಲ ಹೊಟ್ಟೆಗೆ ತೆಗೆದುಕೊಳ್ಳುವಾಗ ಮಾತ್ರ ಮಾಹಿತಿ ಇದ್ದವರಲ್ಲಿ ಸಂಗ್ರಹಿಸಿ ತೆಗೆದುಕೊಳ್ಳಿ.
ಇದರ ಸೊಪ್ಪು ಬೇರು ಎಲೆ ಹೂವು ಕಾಂಡ ಎಲ್ಲವೂ ಉಪಯೋಗಕ್ಕೆ ಬರುತ್ತದೆ.
1) ಇದರ ಸೊಪ್ಪನ್ನು ಅರೆದು ಮೂಲವ್ಯಾಧಿ ಮೊಳಕೆಗೆ ಹಚ್ಚುವುದರಿಂದ ಗುಣವಾಗುತ್ತದೆ.
2) ನಾಭಿಯ ಕೆಳಗೆ ಸೊಪ್ಪಿನ ಪೇಸ್ಟನ್ನು ಹಚ್ಚುವುದರಿಂದ ಮೂತ್ರ ಕಟ್ಟು ಸಲ್ಲಿಸಾಗಿ ಹೊರ ಹೋಗುತ್ತದೆ.
3) ನೀಲಿಯ ಹಸಿಯಾದ ಸೊಪ್ಪನ್ನು ಅರೆದು ಕೂದಲಿಗೆ ಹಚ್ಚುವುದರಿಂದ ಕೂದಲು ಉದುರುವುದು ಹೊಟ್ಟು ನಿವಾರಣೆ ಆಗುತ್ತದೆ ಮತ್ತು ಬಣ್ಣ ಬರುತ್ತದೆ.
4) ಪ್ರಮುಖವಾಗಿ ನೀಲಿ ಸೊಪ್ಪನ್ನು ಉಪಯೋಗಿಸಿ ಅಳಲೆ ಕಾಯಿ, ತಾರೆ ಕಾಯಿ, ನೆಲ್ಲಿಕಾಯಿ,ವಾಯುವಿಳಂಗ, ಒಂದೆಲಗ, ನೀಲಿ ಸೊಪ್ಪುಮದರಂಗಿ,ಹೊನಗನ್ನೆ, ಭೃಂಗರಾಜ ಸೊಪ್ಪು ಇಲಿ ಕಿವಿ ಸೊಪ್ಪು ವಿಳ್ಯದೆಲೆ ಕೆಂಪು ದಾಸವಾಳ ಹೂವು ಗರಗ ಸೊಪ್ಪು ನಾಮಧಾರಿ ಸೊಪ್ಪು, ಗಾಂಧಾರಿ ಸೊಪ್ಪು, ಕರಿಬೇವಿನ ಸೊಪ್ಪು, ಆಲದ ಮರದ ಬಿಳಲು, ಅಂತರ ಗಂಗೆ, ದಡಸಲು ಸೊಪ್ಪು,ಮಲ್ಲಿಗೆ ಹೂ, ಜಟಮಾಸಿ ಇವುಗಳನ್ನು ಕುಟ್ಟಿ ಪುಡಿಪುಡಿ ಮಾಡಿ ಬಾಳೆಯ ದಿಂಡಿನ ಸರದಲ್ಲಿ ಪೇಸ್ಟ್ ಮಾಡಿ ಒಣಗಿಸಿ ಸೋಪು ಮತ್ತು ಎಣ್ಣೆಗೆ ಉಪಯೋಗಿಸುತ್ತೇನೆ.
ಅಗತ್ಯ ಇದ್ದವರು ಉಪಯೋಗ ಪಡೆಯಬಹುದು
5) ಸುಮಾರು ಎರಡು ಚಮಚದಷ್ಟು ರಸವನ್ನು ಅಷ್ಟೇ ಹಾಲಿನೊಂದಿಗೆ ಸೇರಿಸಿ ಹೊಟ್ಟೆಗೆ ತೆಗೆದುಕೊಳ್ಳುವುದರಿಂದ ಹುಚ್ಚುನಾಯಿ ಕಡಿತದ ವಿಷ ಗುಣವಾಗುತ್ತದೆ ಮತ್ತು ಕಚ್ಚಿದ ಜಾಗಕ್ಕೆ ಇದರ ಪೇಸ್ಟನ್ನು ಹಚ್ಚಬೇಕು ಕೆಲವರಿಗೆ ತಲೆನೋವು ಬರಬಹುದು ಭಯಪಡುವ ಅಗತ್ಯ ಇಲ್ಲ.
6) ಬೇರಿನ ನಯವಾದ ಪುಡಿಯನ್ನು ಹಲ್ಲಿನ ಒಳಗಡೆಗೆ ತುಂಬುವುದರಿಂದ ಹಲ್ಲು ನೋವು ನಿವಾರಣೆ ಆಗುತ್ತದೆ.
7) ನೀಲಿ ಸೊಪ್ಪಿನ ಪೇಸ್ಟನ್ನು ಹಚ್ಚುವುದರಿಂದ ಸರ್ಪ ಸುತ್ತು ಗುಣವಾಗುತ್ತದೆ.
8) ತಲೆಯಲ್ಲಿ ಆಗುವ ಜಿರಳೆ ಹುಣ್ಣಿಗೆ ಇದರ ಪೇಸ್ಟ್ ಒಳ್ಳೆಯ ಔಷಧಿ.
9) ಸೊಪ್ಪಿನ ಪೇಸ್ಟನ್ನು ಕೆಚ್ಚಲಿಗೆ ಹಚ್ಚುವುದರಿಂದ ಕೆಚ್ಚಲ ಬಾವು ನಿವಾರಣೆ ಯಾಗುತ್ತದೆ. ಇದು ತಲೆಮಾರಿನಿಂದ ಕೆಚ್ಚಲು ಬಾವಿಗೆ ಉಪಯೋಗಿಸಿಕೊಂಡು ಬಂದ ಔಷಧಿ.
10) ನೀಲಿ ಬೀಜವನ್ನು ಚೆನ್ನಾಗಿ ಅರೆದು ವಸ್ತ್ರಗಾಳಿದ ಚೂರ್ಣ ಮಾಡಿ ಕಣ್ಣಿಗೆ ಅಂಜನ ಇಡುವುದರಿಂದ ಕಣ್ಣಿನ ಪೊರೆ ನಿವಾರಣೆಯಾಗುತ್ತದೆ.
11) ಆಕಸ್ಮಿಕವಾಗಿ ಯಾವುದೇ ಕಬ್ಬಿಣ ಅಥವಾ ಇನ್ನಿತರೆ ಧಾತುಗಳು ದೇಹದಲ್ಲಿ ಸೇರಿಕೊಂಡಾಗ ಇದರ ಕಷಾಯವನ್ನು ಕುಡಿಯುತ್ತಾ ಬಂದರೆ ಅದು ನಿವಾರಣೆಯಾಗುತ್ತದೆ.
12) ಇದರ ಕಷಾಯ ಕುಡಿಯುತ್ತಾ ಬಂದರೆ ಚರ್ಮರೋಗ ನಿವಾರಣೆ ಆಗುತ್ತದೆ.
*ವಿಶೇಷ ಸೂಚನೆ*
13) ಹೊಟ್ಟೆಗೆ ತೆಗೆದುಕೊಳ್ಳುವಾಗ ಭೇದಿ ಆಗುವ ಸಾಧ್ಯತೆ ಹೆಚ್ಚು.

🥢 ಸುಮನಾ ಮಳಲಗದ್ದೆ 9980182883.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

22 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago