ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದ ಆರೋಪಿಯ ಮನೆಯನ್ನು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಕೆಡವಿ ಹಾಕುವ ಕಾರ್ಯ ನಡೆಸಲಾಗಿದೆ. ಆರೋಪಿಯು 5 ದಿನಗಳ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ.
ಉತ್ತರ ಪ್ರದೇಶದ ಫತೇಪುರದಲ್ಲಿ ಮಹಮ್ಮದ್ ಸಿಕಂದರ್ ಖಾನ್ ಎಂಬಾತ 19 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ ನಂತರ ಆಕೆಯ ತಲೆಯನ್ನು ಇಟ್ಟಿಗೆಯಿಂದ ಪುಡಿಮಾಡಿ ಕೊಂದಿದ್ದ. ಈ ಬಗ್ಗೆ ಯುವತಿಯ ಪೋಷಕರು ಇದು ಲವ್ ಜಿಹಾದ್ ಎಂದು ಆರೋಪಿಸಿದ್ದರು.
ತಕ್ಷಣವೇ ಎಚ್ಚೆತ್ತ ಉತ್ತರ ಪ್ರದೇಶದ ಆಡಳಿತವು ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿತ್ತು. ಆರೋಪಿಯ ಬಂಧನದ ಬಳಿಕ ಇದೀಗ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಆರೋಪಿಯ ಮನೆ ಕೆಡವಿ ಹಾಕುವ ಕಾರ್ಯ ನಡೆಯುತ್ತಿದೆ.
(Source : ANI )
ಹಿಂದೂ ಮಹಿಳೆಯೊಬ್ಬರು ಸಿಕಂದರ್ ಖಾನ್ ಅಲಿಯಾಸ್ ಸೋನು ಜೊತೆ ದೂರದ ಸಂಬಂಧ ಹೊಂದಿದ್ದರು. ಜೂನ್ 22 ರಂದು, ಅವರು ಮದುವೆ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದ ಫತೇಪುರಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಭೇಟಿಯಾಗಲು ನಿರ್ಧರಿಸಿದರು. ರಾತ್ರಿ 9 ಗಂಟೆ ಸುಮಾರಿಗೆ, ಆ ಯುವತಿ ಮದುವೆ ಹಾಲ್ನಿಂದ ಹೊರಹೋಗಿ ಸಿಕಂದರ್ ನನ್ನು ಭೇಟಿಯಾಗಿದ್ದರು. ಮರುದಿನ ಬೆಳಿಗ್ಗೆ, ಆಕೆ ಗಂಭೀರ ಗಾಯದೊಂದಿಗೆ ಪತ್ತೆಯಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಪೊಲೀಸರು ಆರೋಪಿಯನ್ನು ವಿಚಾರಿಸಿದಾಗ ತನ್ನೊಂದಿಗೆ ಆಕೆ ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಾಳೆ, ಇದಕ್ಕಾಗಿ ಹತ್ಯೆ ಮಾಡಲಾಗಿದೆ ಸಿಕಂದರ್ ಪೊಲೀಸರಿಗೆ ತಿಳಿಸಿದ್ದ.
ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…
ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…
ರಾಜ್ಯದಲ್ಲಿ ನೆನೆಗುದ್ದಿಗೆ ಬಿದ್ದಿದ್ದ ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ ರೈಲ್ವೆ…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…
ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…
ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…