ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದ ಆರೋಪಿಯ ಮನೆಯನ್ನು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಕೆಡವಿ ಹಾಕುವ ಕಾರ್ಯ ನಡೆಸಲಾಗಿದೆ. ಆರೋಪಿಯು 5 ದಿನಗಳ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ.
ಉತ್ತರ ಪ್ರದೇಶದ ಫತೇಪುರದಲ್ಲಿ ಮಹಮ್ಮದ್ ಸಿಕಂದರ್ ಖಾನ್ ಎಂಬಾತ 19 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ ನಂತರ ಆಕೆಯ ತಲೆಯನ್ನು ಇಟ್ಟಿಗೆಯಿಂದ ಪುಡಿಮಾಡಿ ಕೊಂದಿದ್ದ. ಈ ಬಗ್ಗೆ ಯುವತಿಯ ಪೋಷಕರು ಇದು ಲವ್ ಜಿಹಾದ್ ಎಂದು ಆರೋಪಿಸಿದ್ದರು.
ತಕ್ಷಣವೇ ಎಚ್ಚೆತ್ತ ಉತ್ತರ ಪ್ರದೇಶದ ಆಡಳಿತವು ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿತ್ತು. ಆರೋಪಿಯ ಬಂಧನದ ಬಳಿಕ ಇದೀಗ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಆರೋಪಿಯ ಮನೆ ಕೆಡವಿ ಹಾಕುವ ಕಾರ್ಯ ನಡೆಯುತ್ತಿದೆ.
(Source : ANI )
ಹಿಂದೂ ಮಹಿಳೆಯೊಬ್ಬರು ಸಿಕಂದರ್ ಖಾನ್ ಅಲಿಯಾಸ್ ಸೋನು ಜೊತೆ ದೂರದ ಸಂಬಂಧ ಹೊಂದಿದ್ದರು. ಜೂನ್ 22 ರಂದು, ಅವರು ಮದುವೆ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದ ಫತೇಪುರಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಭೇಟಿಯಾಗಲು ನಿರ್ಧರಿಸಿದರು. ರಾತ್ರಿ 9 ಗಂಟೆ ಸುಮಾರಿಗೆ, ಆ ಯುವತಿ ಮದುವೆ ಹಾಲ್ನಿಂದ ಹೊರಹೋಗಿ ಸಿಕಂದರ್ ನನ್ನು ಭೇಟಿಯಾಗಿದ್ದರು. ಮರುದಿನ ಬೆಳಿಗ್ಗೆ, ಆಕೆ ಗಂಭೀರ ಗಾಯದೊಂದಿಗೆ ಪತ್ತೆಯಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಪೊಲೀಸರು ಆರೋಪಿಯನ್ನು ವಿಚಾರಿಸಿದಾಗ ತನ್ನೊಂದಿಗೆ ಆಕೆ ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಾಳೆ, ಇದಕ್ಕಾಗಿ ಹತ್ಯೆ ಮಾಡಲಾಗಿದೆ ಸಿಕಂದರ್ ಪೊಲೀಸರಿಗೆ ತಿಳಿಸಿದ್ದ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…