ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದ ಆರೋಪಿಯ ಮನೆಯನ್ನು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಕೆಡವಿ ಹಾಕುವ ಕಾರ್ಯ ನಡೆಸಲಾಗಿದೆ. ಆರೋಪಿಯು 5 ದಿನಗಳ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ.
ಉತ್ತರ ಪ್ರದೇಶದ ಫತೇಪುರದಲ್ಲಿ ಮಹಮ್ಮದ್ ಸಿಕಂದರ್ ಖಾನ್ ಎಂಬಾತ 19 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿದ ನಂತರ ಆಕೆಯ ತಲೆಯನ್ನು ಇಟ್ಟಿಗೆಯಿಂದ ಪುಡಿಮಾಡಿ ಕೊಂದಿದ್ದ. ಈ ಬಗ್ಗೆ ಯುವತಿಯ ಪೋಷಕರು ಇದು ಲವ್ ಜಿಹಾದ್ ಎಂದು ಆರೋಪಿಸಿದ್ದರು.
ತಕ್ಷಣವೇ ಎಚ್ಚೆತ್ತ ಉತ್ತರ ಪ್ರದೇಶದ ಆಡಳಿತವು ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿತ್ತು. ಆರೋಪಿಯ ಬಂಧನದ ಬಳಿಕ ಇದೀಗ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಆರೋಪಿಯ ಮನೆ ಕೆಡವಿ ಹಾಕುವ ಕಾರ್ಯ ನಡೆಯುತ್ತಿದೆ.
(Source : ANI )
ಹಿಂದೂ ಮಹಿಳೆಯೊಬ್ಬರು ಸಿಕಂದರ್ ಖಾನ್ ಅಲಿಯಾಸ್ ಸೋನು ಜೊತೆ ದೂರದ ಸಂಬಂಧ ಹೊಂದಿದ್ದರು. ಜೂನ್ 22 ರಂದು, ಅವರು ಮದುವೆ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದ ಫತೇಪುರಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಭೇಟಿಯಾಗಲು ನಿರ್ಧರಿಸಿದರು. ರಾತ್ರಿ 9 ಗಂಟೆ ಸುಮಾರಿಗೆ, ಆ ಯುವತಿ ಮದುವೆ ಹಾಲ್ನಿಂದ ಹೊರಹೋಗಿ ಸಿಕಂದರ್ ನನ್ನು ಭೇಟಿಯಾಗಿದ್ದರು. ಮರುದಿನ ಬೆಳಿಗ್ಗೆ, ಆಕೆ ಗಂಭೀರ ಗಾಯದೊಂದಿಗೆ ಪತ್ತೆಯಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು. ಪೊಲೀಸರು ಆರೋಪಿಯನ್ನು ವಿಚಾರಿಸಿದಾಗ ತನ್ನೊಂದಿಗೆ ಆಕೆ ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಾಳೆ, ಇದಕ್ಕಾಗಿ ಹತ್ಯೆ ಮಾಡಲಾಗಿದೆ ಸಿಕಂದರ್ ಪೊಲೀಸರಿಗೆ ತಿಳಿಸಿದ್ದ.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…