Advertisement
ಸುದ್ದಿಗಳು

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

Share

ಉತ್ತರ ಪ್ರದೇಶದಲ್ಲಿ ಭಾರೀ ಮಳೆ, ಗುಡುಗು, ಮಿಂಚು ಹಾಗೂ ಬಿರುಗಾಳಿಯಿಂದ ಉಂಟಾದ ಅವಾಂತರದಲ್ಲಿ ಸಾವಿನ ಸಂಖ್ಯೆ 142ಕ್ಕೆ ಏರಿಕೆಯಾಗಿದೆ. ವಿಶೇಷವಾಗಿ ರಾಜ್ಯದ ಪೂರ್ವ ಹಾಗೂ ಮಧ್ಯ ಭಾಗಗಳಲ್ಲಿ ಭೀಕರ ಹಾನಿ ಸಂಭವಿಸಿದ್ದು, ವಾರಾಣಸಿ, ಪ್ರಯಾಗರಾಜ್‌, ಕಾನ್ಪುರ ಸೇರಿದಂತೆ ಹಲವು ಜಿಲ್ಲೆಗಳು ತೀವ್ರವಾಗಿ ಬಾಧಿತವಾಗಿವೆ.

ಹವಾಮಾನ ತಜ್ಞರ ಪ್ರಕಾರ, ಈ ರೀತಿಯ ಬಿರುಗಾಳಿಯನ್ನು ಉತ್ತರ ಭಾರತದಲ್ಲಿ “ಅಂಧಿ” (Andhi) ಎಂದು ಕರೆಯಲಾಗುತ್ತದೆ. ಇದು ಸಾಮಾನ್ಯವಾಗಿ ಬೇಸಿಗೆ ಅಂತ್ಯ ಹಾಗೂ ಮುಂಗಾರು ಆರಂಭದ ನಡುವೆ ಉಂಟಾಗುವ ವಾತಾವರಣದ ಅಸ್ಥಿರತೆಯಿಂದ ರೂಪುಗೊಳ್ಳುತ್ತದೆ. ಈ ಬಾರಿ ಬಿಸಿಯಾದ ಭೂಮಿಯ ಮೇಲ್ಮೈ, ತೇವಾಂಶಭರಿತ ಪೂರ್ವ ಗಾಳಿಗಳು ಹಾಗೂ ಮೇಲ್ಮಟ್ಟದ ಒಣ ಪಶ್ಚಿಮ ಗಾಳಿಗಳ ಸಂಘರ್ಷದಿಂದ ವಾತಾವರಣ ಅತಿಯಾಗಿ ಅಸ್ಥಿರಗೊಂಡಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ತಜ್ಞರ ವಿಶ್ಲೇಷಣೆಯಂತೆ, ನೆಲದ ಸಮೀಪದ ಬಿಸಿಯಾದ ಹಾಗೂ ತೇವಾಂಶ ಹೊಂದಿದ ಗಾಳಿ ಮೇಲಕ್ಕೆ ಏರಿದಾಗ, ಮೇಲ್ಮಟ್ಟದಲ್ಲಿದ್ದ ಒಣ ಹಾಗೂ ತಂಪಾದ ಗಾಳಿಯೊಂದಿಗೆ ಘರ್ಷಣೆಗೊಂಡು ಭಾರೀ ಗುಡುಗು, ಮಿಂಚು, ಬಿರುಗಾಳಿ ಮತ್ತು ಧೂಳು ಚಂಡಮಾರುತಕ್ಕೆ ಕಾರಣವಾಯಿತು. ಕೆಲವು ಪ್ರದೇಶಗಳಲ್ಲಿ ಗಾಳಿಯ ವೇಗವು ಗಂಟೆಗೆ 100 ಕಿಮೀ ಗಿಂತಲೂ ಹೆಚ್ಚು ದಾಖಲಾಗಿರುವ ಮಾಹಿತಿ ಇದೆ.

ಈ ಬಿರುಗಾಳಿಯಿಂದ ಅನೇಕ ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಮರಗಳು, ವಿದ್ಯುತ್‌ ಕಂಬಗಳು ಉರುಳಿವೆ. ಹೆಚ್ಚಿನ ಸಾವುಗಳು ಗೋಡೆ ಕುಸಿತ, ಮರ ಬೀಳುವುದು ಹಾಗೂ ಹಾರುವ ವಸ್ತುಗಳ ಅಪ್ಪಳಿಕೆಯಿಂದ ಸಂಭವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂಡಮಾರುತದಿಂದ ನೂರಾರು ಎಕರೆ ಬೆಳೆ ಹಾನಿಯಾಗಿದ್ದು, ಸಾಕುಪ್ರಾಣಿಗಳೂ ಸಾವನ್ನಪ್ಪಿವೆ. ರೈತರಿಗೆ ದೊಡ್ಡ ಮಟ್ಟದ ನಷ್ಟ ಉಂಟಾಗಿರುವ ಬಗ್ಗೆ ವರದಿಯಾಗಿದೆ. ರಾಜ್ಯ ಸರ್ಕಾರ ಪರಿಹಾರ ಕಾರ್ಯವನ್ನು ವೇಗಗೊಳಿಸಿದ್ದು, ಜಿಲ್ಲಾಧಿಕಾರಿಗಳೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹವಾಮಾನ ಬದಲಾವಣೆಯ ಪ್ರಭಾವವೇ? :  ಹವಾಮಾನ ತಜ್ಞರು ಹೇಳುವಂತೆ, ಉತ್ತರ ಭಾರತದಲ್ಲಿ ಮೇ ತಿಂಗಳಲ್ಲಿ ಧೂಳುಗಾಳಿ ಹಾಗೂ ಗುಡುಗು ಸಹಿತ ಮಳೆ ಸಾಮಾನ್ಯವಾದರೂ, ಇತ್ತೀಚಿನ ವರ್ಷಗಳಲ್ಲಿ ಇಂತಹ ಅತಿರೇಕ  ಹವಾಮಾನ ಘಟನೆಗಳ ತೀವ್ರತೆ ಮತ್ತು ಆವೃತ್ತಿ ಹೆಚ್ಚುತ್ತಿರುವುದು ಗಮನಾರ್ಹವಾಗಿದೆ. ಜಾಗತಿಕ ತಾಪಮಾನ ಏರಿಕೆ, ಅತಿಯಾದ ಉಷ್ಣತೆ ಹಾಗೂ ವಾತಾವರಣದ ಅಸ್ಥಿರತೆಯೂ ಇದಕ್ಕೆ ಕಾರಣವಾಗುತ್ತಿದೆ ಎಂಬ ಆತಂಕ ವ್ಯಕ್ತವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A deadly storm system in Uttar Pradesh killed over 100 people due to intense dust storms, lightning, heavy rain, and high-speed winds. Meteorologists explained that the collision of warm moist easterly winds with dry westerlies created severe atmospheric instability, triggering destructive “Andhi” storms across several districts.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

55 minutes ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

2 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

12 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago