ಉತ್ತರಾಖಂಡ | ಸುರಂಗ ಕುಸಿತ ಪ್ರಕರಣ | ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಕೆಲಸ ಆರಂಭ | ಹೊರಬಂದ ಮೊದಲ ಕಾರ್ಮಿಕ |

November 28, 2023
8:00 PM
ಉತ್ತರಾಖಂಡದ ಉತ್ತರಕಾಶಿ ಬಳಿಯ ಸುರಂಗ ಕುಸಿತದಿಂದ 17 ದಿನಗಳಿಂದ ಸುರಂಗದೊಳಗೆ ಸಿಲುಕಿಕೊಂಡಿದ್ದ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ.

ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಆರಂಭಗೊಂಡಿದೆ.

Advertisement

ಸಿಲ್ಕ್ಯಾರಾ ಸುರಂಗ ಕುಸಿತದಿಂದ ಕಳೆದ  17 ದಿನಗಳಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ ಆರಂಭಗೊಂಡಿದೆ. ರಕ್ಷಣೆಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಸುರಂಗ ಕುಸಿದ ಬಳಿಕ ರಕ್ಷಣೆಗಾಗಿ ಕಳೆದ 17 ದಿನಗಳಿಂದ ವಿವಿಧ ಪ್ರಯತ್ನ ಮಾಡಲಾಗಿತ್ತು. ರಕ್ಷಣೆಗೆ ಸುಮಾರು 60 ಮೀಟರ್‌ ಸುರಂಗ ಕೊರೆದು ಈಗ ಸ್ಟ್ರೆಚರ್‌ನಲ್ಲಿ ಮೂಲಕ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ. ಕಾರ್ಮಿಕರನ್ನು ತಲುಪಿದ ನಂತರ, ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರನ್ನು ಹೊರತರಲು 3-4 ಗಂಟೆಗಳು ಬೇಕಾಗುತ್ತದೆ. ಪೈಪ್ ಮೂಲಕ ಚಕ್ರದ ಸ್ಟ್ರೆಚರ್‌ನಲ್ಲಿ ಪ್ರತಿ ಕಾರ್ಮಿಕನನ್ನು ಹೊರತೆಗೆ ಕರೆತರಲು ಸುಮಾರು 3-5 ನಿಮಿಷ ತೆಗೆದುಕೊಳ್ಳುತ್ತದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ತೋಟಗಾರಿಕಾ ಹಣ್ಣಿನ ಬೆಳೆಗಳತ್ತ ಚಿತ್ತ | ಜಾಗತಿಕ ಮಾರುಕಟ್ಟೆಗೆ ಭಾರತೀಯ ತಾಜಾ ಹಣ್ಣುಗಳ ಪರಿಚಯ |
April 22, 2025
7:18 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೆ ಪರಿಸರದ ಬಗ್ಗೆ ಕಾಳಜಿ ಕುರಿತು ಹೆಚ್ಚು ತಿಳುವಳಿಕೆ ನೀಡಬೇಕಾದ ಅಗತ್ಯವಿದೆ
April 22, 2025
6:51 AM
by: The Rural Mirror ಸುದ್ದಿಜಾಲ
ಹಾವು, ಕಾಗೆ, ನಾಯಿಗಳು ಕನಸಿನಲ್ಲಿ ಬಂದ್ರೆ ನಿರ್ಲಕ್ಷ್ಯ ಮಾಡ್ಬೇಡಿ…!
April 22, 2025
6:41 AM
by: ದ ರೂರಲ್ ಮಿರರ್.ಕಾಂ
ಜಮ್ಮು-ಕಾಶ್ಮೀರದಲ್ಲಿ ಮೇಘಸ್ಫೋಟ | ಆಲಿಕಲ್ಲು, ಗುಡುಗು ಸಹಿತ ಭಾರಿ ಮಳೆ
April 22, 2025
6:30 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group