ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿತದಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಅಂತಿಮ ಘಟ್ಟ ತಲುಪಿದ್ದು, ಕಾರ್ಮಿಕರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯ ಆರಂಭಗೊಂಡಿದೆ.
ಸಿಲ್ಕ್ಯಾರಾ ಸುರಂಗ ಕುಸಿತದಿಂದ ಕಳೆದ 17 ದಿನಗಳಿಂದ ಒಳಗಡೆ ಸಿಲುಕಿರುವ 41 ಕಾರ್ಮಿಕರ ರಕ್ಷಣೆ ಕಾರ್ಯ ಆರಂಭಗೊಂಡಿದೆ. ರಕ್ಷಣೆಗೆ ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.ಎಲ್ಲಾ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಸುರಂಗ ಕುಸಿದ ಬಳಿಕ ರಕ್ಷಣೆಗಾಗಿ ಕಳೆದ 17 ದಿನಗಳಿಂದ ವಿವಿಧ ಪ್ರಯತ್ನ ಮಾಡಲಾಗಿತ್ತು. ರಕ್ಷಣೆಗೆ ಸುಮಾರು 60 ಮೀಟರ್ ಸುರಂಗ ಕೊರೆದು ಈಗ ಸ್ಟ್ರೆಚರ್ನಲ್ಲಿ ಮೂಲಕ ಕಾರ್ಮಿಕರನ್ನು ಹೊರತರುವ ಕೆಲಸ ನಡೆಸಲಾಗುತ್ತಿದೆ. ಕಾರ್ಮಿಕರನ್ನು ತಲುಪಿದ ನಂತರ, ಸಿಕ್ಕಿಬಿದ್ದ ಎಲ್ಲಾ ಕಾರ್ಮಿಕರನ್ನು ಹೊರತರಲು 3-4 ಗಂಟೆಗಳು ಬೇಕಾಗುತ್ತದೆ. ಪೈಪ್ ಮೂಲಕ ಚಕ್ರದ ಸ್ಟ್ರೆಚರ್ನಲ್ಲಿ ಪ್ರತಿ ಕಾರ್ಮಿಕನನ್ನು ಹೊರತೆಗೆ ಕರೆತರಲು ಸುಮಾರು 3-5 ನಿಮಿಷ ತೆಗೆದುಕೊಳ್ಳುತ್ತದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…