ರಾಷ್ಟ್ರೀಯ

ಉತ್ತರಕಾಶಿಯಲ್ಲಿ ಹಿಮಪಾತ | 19 ಪರ್ವತಾರೋಹಿಗಳು ಹಿಮಪಾತಕ್ಕೆ ಸಿಲುಕಿ ಸಾವು | 70 ಕ್ಕೂ ಹೆಚ್ಚು ಜನರಿದ್ದ ತಂಡ | ಹಲವರ ರಕ್ಷಣೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು ನಿಲ್ಲಿಸಲಾಗಿತ್ತು. ಮತ್ತೆ ಶೋಧ ಕಾರ್ಯ ಮುಂದುವರಿದಿದೆ.

Advertisement
Advertisement

ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳ ತಂಡವು ಉತ್ತರಕಾಶಿಯಲ್ಲಿ ಹಿಮಪಾತದಲ್ಲಿ ಸಿಕ್ಕಿಬಿದ್ದ ಎರಡು ದಿನಗಳ ನಂತರ  ಮೃತದೇಹಗಳು ಪತ್ತೆಯಾಗಿವೆ. 30 ಜನರ ರಕ್ಷಣಾ ತಂಡ ನಿರಂತರ ಶೊಧ ಕಾರ್ಯ ನಡೆಸುತ್ತಿದೆ.ಮಂಗಳವಾರ  ಈ ತಂಡವು ಪರ್ವತಾರೋಹಣ ಮುಗಿಸಿ ಹಿಂತಿರುಗುತ್ತಿದ್ದಾಗ ಹಿಮಪಾತವು 17,000 ಅಡಿ ಎತ್ತರದ ದ್ರೌಪದಿ ಕಾ ದಂಡ  ಶಿಖರವನ್ನು ಅಪ್ಪಳಿಸಿತು. ಹೀಗಾಗಿ ಹಿಮಪಾತದಲ್ಲಿ ಈ ತಂಡ ಸಿಲುಕಿತು. ಈ ತಂಡದಲ್ಲಿ ಒಟ್ಟು 70 ಕ್ಕೂ ಹೆಚ್ಚು ಜನರಿದ್ದರು. ಈ ತಂಡದಲ್ಲಿ 34 ಪ್ರಶಿಕ್ಷಣಾರ್ಥಿಗಳು ಸೇರಿದಂತೆ 42 ಆರೋಹಿಗಳಿದ್ದರು.

ರಕ್ಷಣಾ ಕಾರ್ಯದಲ್ಲಿ ಐಟಿಬಿಪಿ, ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್, ಏರ್ ಫೋರ್ಸ್, ಆರ್ಮಿ, ಎಸ್‌ಡಿಆರ್‌ಎಫ್, ಇತ್ಯಾದಿಗಳ ವಿವಿಧ ತಂಡಗಳಿಂದ ಒಟ್ಟು 30 ಜನರ ತಂಡ ಇದೆ. ಈಗಾಗಲೇ ಸುಮಾರು 14 ಪರ್ವತಾರೋಹಿಗಳನ್ನು ರಕ್ಷಿಸಲಾಗಿದೆ. ಹತ್ತಕ್ಕೂ ಹೆಚ್ಚು ಪರ್ವತಾರೋಹಿಗಳು ಇನ್ನೂ ಕಾಣೆಯಾಗಿದ್ದಾರೆ.

ದುರಂತದ ಭೀಕರ ಅನುಭವವನ್ನು ವಿವರಿಸಿದ ಪರ್ವತಾರೋಹಣದಲ್ಲಿ ಬದುಕುಳಿದ ದೀಪ್ ಠಾಕೂರ್, ‘ದ್ರೌಪದಿ ಕಾ ದಂಡ’ ಶಿಖರವನ್ನು ಹತ್ತುವಾಗ ಇದ್ದಕ್ಕಿದ್ದಂತೆ ಹಿಮಪಾತ ಸಂಭವಿಸಿದೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

9 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

10 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

13 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

14 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

14 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

2 days ago