Advertisement
ರಾಷ್ಟ್ರೀಯ

ಉತ್ತರಕಾಶಿಯಲ್ಲಿ ಹಿಮಪಾತ | 19 ಪರ್ವತಾರೋಹಿಗಳು ಹಿಮಪಾತಕ್ಕೆ ಸಿಲುಕಿ ಸಾವು | 70 ಕ್ಕೂ ಹೆಚ್ಚು ಜನರಿದ್ದ ತಂಡ | ಹಲವರ ರಕ್ಷಣೆ |

Share

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು ನಿಲ್ಲಿಸಲಾಗಿತ್ತು. ಮತ್ತೆ ಶೋಧ ಕಾರ್ಯ ಮುಂದುವರಿದಿದೆ.

ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳ ತಂಡವು ಉತ್ತರಕಾಶಿಯಲ್ಲಿ ಹಿಮಪಾತದಲ್ಲಿ ಸಿಕ್ಕಿಬಿದ್ದ ಎರಡು ದಿನಗಳ ನಂತರ  ಮೃತದೇಹಗಳು ಪತ್ತೆಯಾಗಿವೆ. 30 ಜನರ ರಕ್ಷಣಾ ತಂಡ ನಿರಂತರ ಶೊಧ ಕಾರ್ಯ ನಡೆಸುತ್ತಿದೆ.ಮಂಗಳವಾರ  ಈ ತಂಡವು ಪರ್ವತಾರೋಹಣ ಮುಗಿಸಿ ಹಿಂತಿರುಗುತ್ತಿದ್ದಾಗ ಹಿಮಪಾತವು 17,000 ಅಡಿ ಎತ್ತರದ ದ್ರೌಪದಿ ಕಾ ದಂಡ  ಶಿಖರವನ್ನು ಅಪ್ಪಳಿಸಿತು. ಹೀಗಾಗಿ ಹಿಮಪಾತದಲ್ಲಿ ಈ ತಂಡ ಸಿಲುಕಿತು. ಈ ತಂಡದಲ್ಲಿ ಒಟ್ಟು 70 ಕ್ಕೂ ಹೆಚ್ಚು ಜನರಿದ್ದರು. ಈ ತಂಡದಲ್ಲಿ 34 ಪ್ರಶಿಕ್ಷಣಾರ್ಥಿಗಳು ಸೇರಿದಂತೆ 42 ಆರೋಹಿಗಳಿದ್ದರು.

ರಕ್ಷಣಾ ಕಾರ್ಯದಲ್ಲಿ ಐಟಿಬಿಪಿ, ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್, ಏರ್ ಫೋರ್ಸ್, ಆರ್ಮಿ, ಎಸ್‌ಡಿಆರ್‌ಎಫ್, ಇತ್ಯಾದಿಗಳ ವಿವಿಧ ತಂಡಗಳಿಂದ ಒಟ್ಟು 30 ಜನರ ತಂಡ ಇದೆ. ಈಗಾಗಲೇ ಸುಮಾರು 14 ಪರ್ವತಾರೋಹಿಗಳನ್ನು ರಕ್ಷಿಸಲಾಗಿದೆ. ಹತ್ತಕ್ಕೂ ಹೆಚ್ಚು ಪರ್ವತಾರೋಹಿಗಳು ಇನ್ನೂ ಕಾಣೆಯಾಗಿದ್ದಾರೆ.

ದುರಂತದ ಭೀಕರ ಅನುಭವವನ್ನು ವಿವರಿಸಿದ ಪರ್ವತಾರೋಹಣದಲ್ಲಿ ಬದುಕುಳಿದ ದೀಪ್ ಠಾಕೂರ್, ‘ದ್ರೌಪದಿ ಕಾ ದಂಡ’ ಶಿಖರವನ್ನು ಹತ್ತುವಾಗ ಇದ್ದಕ್ಕಿದ್ದಂತೆ ಹಿಮಪಾತ ಸಂಭವಿಸಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

3 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

6 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

15 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

16 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

16 hours ago