Advertisement
ರಾಷ್ಟ್ರೀಯ

ಉತ್ತರಕಾಶಿಯಲ್ಲಿ ಹಿಮಪಾತ | 19 ಪರ್ವತಾರೋಹಿಗಳು ಹಿಮಪಾತಕ್ಕೆ ಸಿಲುಕಿ ಸಾವು | 70 ಕ್ಕೂ ಹೆಚ್ಚು ಜನರಿದ್ದ ತಂಡ | ಹಲವರ ರಕ್ಷಣೆ |

Share

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು ನಿಲ್ಲಿಸಲಾಗಿತ್ತು. ಮತ್ತೆ ಶೋಧ ಕಾರ್ಯ ಮುಂದುವರಿದಿದೆ.

ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳ ತಂಡವು ಉತ್ತರಕಾಶಿಯಲ್ಲಿ ಹಿಮಪಾತದಲ್ಲಿ ಸಿಕ್ಕಿಬಿದ್ದ ಎರಡು ದಿನಗಳ ನಂತರ  ಮೃತದೇಹಗಳು ಪತ್ತೆಯಾಗಿವೆ. 30 ಜನರ ರಕ್ಷಣಾ ತಂಡ ನಿರಂತರ ಶೊಧ ಕಾರ್ಯ ನಡೆಸುತ್ತಿದೆ.ಮಂಗಳವಾರ  ಈ ತಂಡವು ಪರ್ವತಾರೋಹಣ ಮುಗಿಸಿ ಹಿಂತಿರುಗುತ್ತಿದ್ದಾಗ ಹಿಮಪಾತವು 17,000 ಅಡಿ ಎತ್ತರದ ದ್ರೌಪದಿ ಕಾ ದಂಡ  ಶಿಖರವನ್ನು ಅಪ್ಪಳಿಸಿತು. ಹೀಗಾಗಿ ಹಿಮಪಾತದಲ್ಲಿ ಈ ತಂಡ ಸಿಲುಕಿತು. ಈ ತಂಡದಲ್ಲಿ ಒಟ್ಟು 70 ಕ್ಕೂ ಹೆಚ್ಚು ಜನರಿದ್ದರು. ಈ ತಂಡದಲ್ಲಿ 34 ಪ್ರಶಿಕ್ಷಣಾರ್ಥಿಗಳು ಸೇರಿದಂತೆ 42 ಆರೋಹಿಗಳಿದ್ದರು.

ರಕ್ಷಣಾ ಕಾರ್ಯದಲ್ಲಿ ಐಟಿಬಿಪಿ, ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್, ಏರ್ ಫೋರ್ಸ್, ಆರ್ಮಿ, ಎಸ್‌ಡಿಆರ್‌ಎಫ್, ಇತ್ಯಾದಿಗಳ ವಿವಿಧ ತಂಡಗಳಿಂದ ಒಟ್ಟು 30 ಜನರ ತಂಡ ಇದೆ. ಈಗಾಗಲೇ ಸುಮಾರು 14 ಪರ್ವತಾರೋಹಿಗಳನ್ನು ರಕ್ಷಿಸಲಾಗಿದೆ. ಹತ್ತಕ್ಕೂ ಹೆಚ್ಚು ಪರ್ವತಾರೋಹಿಗಳು ಇನ್ನೂ ಕಾಣೆಯಾಗಿದ್ದಾರೆ.

ದುರಂತದ ಭೀಕರ ಅನುಭವವನ್ನು ವಿವರಿಸಿದ ಪರ್ವತಾರೋಹಣದಲ್ಲಿ ಬದುಕುಳಿದ ದೀಪ್ ಠಾಕೂರ್, ‘ದ್ರೌಪದಿ ಕಾ ದಂಡ’ ಶಿಖರವನ್ನು ಹತ್ತುವಾಗ ಇದ್ದಕ್ಕಿದ್ದಂತೆ ಹಿಮಪಾತ ಸಂಭವಿಸಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

14 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

18 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago