Advertisement
ರಾಷ್ಟ್ರೀಯ

ಉತ್ತರಕಾಶಿಯಲ್ಲಿ ಹಿಮಪಾತ | 19 ಪರ್ವತಾರೋಹಿಗಳು ಹಿಮಪಾತಕ್ಕೆ ಸಿಲುಕಿ ಸಾವು | 70 ಕ್ಕೂ ಹೆಚ್ಚು ಜನರಿದ್ದ ತಂಡ | ಹಲವರ ರಕ್ಷಣೆ |

Share

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು ನಿಲ್ಲಿಸಲಾಗಿತ್ತು. ಮತ್ತೆ ಶೋಧ ಕಾರ್ಯ ಮುಂದುವರಿದಿದೆ.

ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳ ತಂಡವು ಉತ್ತರಕಾಶಿಯಲ್ಲಿ ಹಿಮಪಾತದಲ್ಲಿ ಸಿಕ್ಕಿಬಿದ್ದ ಎರಡು ದಿನಗಳ ನಂತರ  ಮೃತದೇಹಗಳು ಪತ್ತೆಯಾಗಿವೆ. 30 ಜನರ ರಕ್ಷಣಾ ತಂಡ ನಿರಂತರ ಶೊಧ ಕಾರ್ಯ ನಡೆಸುತ್ತಿದೆ.ಮಂಗಳವಾರ  ಈ ತಂಡವು ಪರ್ವತಾರೋಹಣ ಮುಗಿಸಿ ಹಿಂತಿರುಗುತ್ತಿದ್ದಾಗ ಹಿಮಪಾತವು 17,000 ಅಡಿ ಎತ್ತರದ ದ್ರೌಪದಿ ಕಾ ದಂಡ  ಶಿಖರವನ್ನು ಅಪ್ಪಳಿಸಿತು. ಹೀಗಾಗಿ ಹಿಮಪಾತದಲ್ಲಿ ಈ ತಂಡ ಸಿಲುಕಿತು. ಈ ತಂಡದಲ್ಲಿ ಒಟ್ಟು 70 ಕ್ಕೂ ಹೆಚ್ಚು ಜನರಿದ್ದರು. ಈ ತಂಡದಲ್ಲಿ 34 ಪ್ರಶಿಕ್ಷಣಾರ್ಥಿಗಳು ಸೇರಿದಂತೆ 42 ಆರೋಹಿಗಳಿದ್ದರು.

ರಕ್ಷಣಾ ಕಾರ್ಯದಲ್ಲಿ ಐಟಿಬಿಪಿ, ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್, ಏರ್ ಫೋರ್ಸ್, ಆರ್ಮಿ, ಎಸ್‌ಡಿಆರ್‌ಎಫ್, ಇತ್ಯಾದಿಗಳ ವಿವಿಧ ತಂಡಗಳಿಂದ ಒಟ್ಟು 30 ಜನರ ತಂಡ ಇದೆ. ಈಗಾಗಲೇ ಸುಮಾರು 14 ಪರ್ವತಾರೋಹಿಗಳನ್ನು ರಕ್ಷಿಸಲಾಗಿದೆ. ಹತ್ತಕ್ಕೂ ಹೆಚ್ಚು ಪರ್ವತಾರೋಹಿಗಳು ಇನ್ನೂ ಕಾಣೆಯಾಗಿದ್ದಾರೆ.

ದುರಂತದ ಭೀಕರ ಅನುಭವವನ್ನು ವಿವರಿಸಿದ ಪರ್ವತಾರೋಹಣದಲ್ಲಿ ಬದುಕುಳಿದ ದೀಪ್ ಠಾಕೂರ್, ‘ದ್ರೌಪದಿ ಕಾ ದಂಡ’ ಶಿಖರವನ್ನು ಹತ್ತುವಾಗ ಇದ್ದಕ್ಕಿದ್ದಂತೆ ಹಿಮಪಾತ ಸಂಭವಿಸಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

9 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

9 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

13 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

13 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

14 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago