Advertisement
ರಾಷ್ಟ್ರೀಯ

ಉತ್ತರಕಾಶಿಯಲ್ಲಿ ಹಿಮಪಾತ | 19 ಪರ್ವತಾರೋಹಿಗಳು ಹಿಮಪಾತಕ್ಕೆ ಸಿಲುಕಿ ಸಾವು | 70 ಕ್ಕೂ ಹೆಚ್ಚು ಜನರಿದ್ದ ತಂಡ | ಹಲವರ ರಕ್ಷಣೆ |

Share

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು ನಿಲ್ಲಿಸಲಾಗಿತ್ತು. ಮತ್ತೆ ಶೋಧ ಕಾರ್ಯ ಮುಂದುವರಿದಿದೆ.

ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳ ತಂಡವು ಉತ್ತರಕಾಶಿಯಲ್ಲಿ ಹಿಮಪಾತದಲ್ಲಿ ಸಿಕ್ಕಿಬಿದ್ದ ಎರಡು ದಿನಗಳ ನಂತರ  ಮೃತದೇಹಗಳು ಪತ್ತೆಯಾಗಿವೆ. 30 ಜನರ ರಕ್ಷಣಾ ತಂಡ ನಿರಂತರ ಶೊಧ ಕಾರ್ಯ ನಡೆಸುತ್ತಿದೆ.ಮಂಗಳವಾರ  ಈ ತಂಡವು ಪರ್ವತಾರೋಹಣ ಮುಗಿಸಿ ಹಿಂತಿರುಗುತ್ತಿದ್ದಾಗ ಹಿಮಪಾತವು 17,000 ಅಡಿ ಎತ್ತರದ ದ್ರೌಪದಿ ಕಾ ದಂಡ  ಶಿಖರವನ್ನು ಅಪ್ಪಳಿಸಿತು. ಹೀಗಾಗಿ ಹಿಮಪಾತದಲ್ಲಿ ಈ ತಂಡ ಸಿಲುಕಿತು. ಈ ತಂಡದಲ್ಲಿ ಒಟ್ಟು 70 ಕ್ಕೂ ಹೆಚ್ಚು ಜನರಿದ್ದರು. ಈ ತಂಡದಲ್ಲಿ 34 ಪ್ರಶಿಕ್ಷಣಾರ್ಥಿಗಳು ಸೇರಿದಂತೆ 42 ಆರೋಹಿಗಳಿದ್ದರು.

ರಕ್ಷಣಾ ಕಾರ್ಯದಲ್ಲಿ ಐಟಿಬಿಪಿ, ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್, ಏರ್ ಫೋರ್ಸ್, ಆರ್ಮಿ, ಎಸ್‌ಡಿಆರ್‌ಎಫ್, ಇತ್ಯಾದಿಗಳ ವಿವಿಧ ತಂಡಗಳಿಂದ ಒಟ್ಟು 30 ಜನರ ತಂಡ ಇದೆ. ಈಗಾಗಲೇ ಸುಮಾರು 14 ಪರ್ವತಾರೋಹಿಗಳನ್ನು ರಕ್ಷಿಸಲಾಗಿದೆ. ಹತ್ತಕ್ಕೂ ಹೆಚ್ಚು ಪರ್ವತಾರೋಹಿಗಳು ಇನ್ನೂ ಕಾಣೆಯಾಗಿದ್ದಾರೆ.

ದುರಂತದ ಭೀಕರ ಅನುಭವವನ್ನು ವಿವರಿಸಿದ ಪರ್ವತಾರೋಹಣದಲ್ಲಿ ಬದುಕುಳಿದ ದೀಪ್ ಠಾಕೂರ್, ‘ದ್ರೌಪದಿ ಕಾ ದಂಡ’ ಶಿಖರವನ್ನು ಹತ್ತುವಾಗ ಇದ್ದಕ್ಕಿದ್ದಂತೆ ಹಿಮಪಾತ ಸಂಭವಿಸಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

9 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

13 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

20 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

20 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago