Advertisement
ರಾಷ್ಟ್ರೀಯ

ಉತ್ತರಕಾಶಿಯಲ್ಲಿ ಹಿಮಪಾತ | 19 ಪರ್ವತಾರೋಹಿಗಳು ಹಿಮಪಾತಕ್ಕೆ ಸಿಲುಕಿ ಸಾವು | 70 ಕ್ಕೂ ಹೆಚ್ಚು ಜನರಿದ್ದ ತಂಡ | ಹಲವರ ರಕ್ಷಣೆ |

Share

ಉತ್ತರಕಾಶಿಯಲ್ಲಿ ನಡೆದ ಹಿಮಪಾತಕ್ಕೆ ಸಿಲುಕಿ 19 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ.  ಹಿಮಪಾತ ಅಪಘಾತದ ಮೂರನೇ ದಿನ ಎಲ್ಲಾ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪುವಲ್ಲಿ ಯಶಸ್ವಿಯಾಗಿದ್ದಾರೆ.ಈಗಾಗಲೇ  ರಕ್ಷಣಾ ತಂಡವು  19 ಪರ್ವತಾರೋಹಿಗಳ ಮೃತದೇಹಗಳನ್ನು ಹೊರತೆಗೆದಿದ್ದು ಇನ್ನುಳಿದವರ ಶೋಧ ಕಾರ್ಯ ಹೆಲಿಕಾಪ್ಟರ್‌ ಮೂಲಕ  ಮುಂದುವರಿದಿದೆ. ಹಿಮಪಾತದ ತೀವ್ರತೆಯಿಂದ  ಗುರುವಾರ ಮಧ್ಯಾಹ್ನದ ನಂತರ  ರಕ್ಷಣಾವನ್ನು ನಿಲ್ಲಿಸಲಾಗಿತ್ತು. ಮತ್ತೆ ಶೋಧ ಕಾರ್ಯ ಮುಂದುವರಿದಿದೆ.

ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ (ಎನ್‌ಐಎಂ) ಪರ್ವತಾರೋಹಿಗಳ ತಂಡವು ಉತ್ತರಕಾಶಿಯಲ್ಲಿ ಹಿಮಪಾತದಲ್ಲಿ ಸಿಕ್ಕಿಬಿದ್ದ ಎರಡು ದಿನಗಳ ನಂತರ  ಮೃತದೇಹಗಳು ಪತ್ತೆಯಾಗಿವೆ. 30 ಜನರ ರಕ್ಷಣಾ ತಂಡ ನಿರಂತರ ಶೊಧ ಕಾರ್ಯ ನಡೆಸುತ್ತಿದೆ.ಮಂಗಳವಾರ  ಈ ತಂಡವು ಪರ್ವತಾರೋಹಣ ಮುಗಿಸಿ ಹಿಂತಿರುಗುತ್ತಿದ್ದಾಗ ಹಿಮಪಾತವು 17,000 ಅಡಿ ಎತ್ತರದ ದ್ರೌಪದಿ ಕಾ ದಂಡ  ಶಿಖರವನ್ನು ಅಪ್ಪಳಿಸಿತು. ಹೀಗಾಗಿ ಹಿಮಪಾತದಲ್ಲಿ ಈ ತಂಡ ಸಿಲುಕಿತು. ಈ ತಂಡದಲ್ಲಿ ಒಟ್ಟು 70 ಕ್ಕೂ ಹೆಚ್ಚು ಜನರಿದ್ದರು. ಈ ತಂಡದಲ್ಲಿ 34 ಪ್ರಶಿಕ್ಷಣಾರ್ಥಿಗಳು ಸೇರಿದಂತೆ 42 ಆರೋಹಿಗಳಿದ್ದರು.

ರಕ್ಷಣಾ ಕಾರ್ಯದಲ್ಲಿ ಐಟಿಬಿಪಿ, ನೆಹರು ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್, ಏರ್ ಫೋರ್ಸ್, ಆರ್ಮಿ, ಎಸ್‌ಡಿಆರ್‌ಎಫ್, ಇತ್ಯಾದಿಗಳ ವಿವಿಧ ತಂಡಗಳಿಂದ ಒಟ್ಟು 30 ಜನರ ತಂಡ ಇದೆ. ಈಗಾಗಲೇ ಸುಮಾರು 14 ಪರ್ವತಾರೋಹಿಗಳನ್ನು ರಕ್ಷಿಸಲಾಗಿದೆ. ಹತ್ತಕ್ಕೂ ಹೆಚ್ಚು ಪರ್ವತಾರೋಹಿಗಳು ಇನ್ನೂ ಕಾಣೆಯಾಗಿದ್ದಾರೆ.

ದುರಂತದ ಭೀಕರ ಅನುಭವವನ್ನು ವಿವರಿಸಿದ ಪರ್ವತಾರೋಹಣದಲ್ಲಿ ಬದುಕುಳಿದ ದೀಪ್ ಠಾಕೂರ್, ‘ದ್ರೌಪದಿ ಕಾ ದಂಡ’ ಶಿಖರವನ್ನು ಹತ್ತುವಾಗ ಇದ್ದಕ್ಕಿದ್ದಂತೆ ಹಿಮಪಾತ ಸಂಭವಿಸಿದೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago