Advertisement
ಸುದ್ದಿಗಳು

ಶಾಲೆಗಳಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ : ಜಿಲ್ಲಾಧಿಕಾರಿ

Share

ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು.

ಅವರು ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್‌ ವಿಭಾಗದಲ್ಲಿ ಮಾ.16ರ ಬುಧವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಕೋರ್ಬೇ ವ್ಯಾಕ್ಸ್ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಮುನ್ನೆಚ್ಚರಿಕಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಾದ್ಯಂತ ಲಸಿಕೆಗಳು ಲಭ್ಯವಿದ್ದು, ಈಗಾಗಲೇ ಜನರು ಎಚ್ಚೆತ್ತುಕೊಂಡು ಲಸಿಕೆಗಳನ್ನು ಪಡೆದರೆ ಮುಂಬರುವ ಕೋವಿಡ್ ಸೋಂಕಿನ ಅಪಾಯಗಳಿಂದ ಪಾರಾಗಬಹುದು ಎಂದು ಕಿವಿ ಮಾತು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಮೊದಲನೇ ಡೋಸ್ 100 ಶೇಕಡಾ, ಎರಡನೇ ಡೋಸ್ 91 ಶೇಕಡಾ ಮತ್ತು 15ವರ್ಷ ಮೇಲ್ಪಟ್ಟವರಿಗೆ 85 ಶೇಕಡಾ ಲಸಿಕೆ ನೀಡಲಾಗಿದೆ. ಇದರೊಂದಿಗೆ ಸುಮಾರು 72 ಸಾವಿರ ಮಕ್ಕಳಿಗೆ ಕೋರ್ಬೇ ವ್ಯಾಕ್ಸ್ ಲಸಿಕೆ ನೀಡುವ ಸಲುವಾಗಿ ಶಾಲೆಗಳಲ್ಲೂ ಲಸಿಕಾ ಅಭಿಯಾನ ಆರಂಭಿಸಲಾಗುವುದು. ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಮುನ್ನೆಚ್ಚರಿಕಾ ಲಸಿಕೆ ನೀಡುವ ಕೆಲಸಗಳಾಗುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಸಿಬ್ಬಂದಿಗಳು ಕೂಡ ಕಡ್ಡಾಯವಾಗಿ ಮುನ್ನೆಚ್ಚರಿಕಾ ಲಸಿಕೆ ಪಡೆದುಕೊಳ್ಳಬೇಕು. ಲಸಿಕೆಯ ಬಗ್ಗೆ ಜನರಲ್ಲಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಿ ಜಿಲ್ಲೆಯಾದ್ಯಂತ ಎಲ್ಲಾ ವಯೋಮಾನದವರಿಗೂ ಶೇಕಡಾ 100ರಷ್ಟು ಲಸಿಕೆ ನೀಡಲು ಯಶಸ್ವಿಯಾಗಿ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶ್ರಮಿಸುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಸರ್ಜನ್ ಡಾ. ಸದಾಶಿವ ಶಾನ್ ಬೋಗ್, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಜ್ಯೋತಿ ಕುಮಾರಿ, ಆರ್.ಸಿ.ಎಚ್. ಡಾ. ರಾಜೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ಸೇರಿದಂತೆ ಇತರೆ ವೈದ್ಯಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

10 hours ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

10 hours ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

1 day ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago