ಸುದ್ದಿಗಳು

ಶಾಲೆಗಳಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ : ಜಿಲ್ಲಾಧಿಕಾರಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು.

Advertisement
Advertisement

ಅವರು ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್‌ ವಿಭಾಗದಲ್ಲಿ ಮಾ.16ರ ಬುಧವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಕೋರ್ಬೇ ವ್ಯಾಕ್ಸ್ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಮುನ್ನೆಚ್ಚರಿಕಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಾದ್ಯಂತ ಲಸಿಕೆಗಳು ಲಭ್ಯವಿದ್ದು, ಈಗಾಗಲೇ ಜನರು ಎಚ್ಚೆತ್ತುಕೊಂಡು ಲಸಿಕೆಗಳನ್ನು ಪಡೆದರೆ ಮುಂಬರುವ ಕೋವಿಡ್ ಸೋಂಕಿನ ಅಪಾಯಗಳಿಂದ ಪಾರಾಗಬಹುದು ಎಂದು ಕಿವಿ ಮಾತು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಮೊದಲನೇ ಡೋಸ್ 100 ಶೇಕಡಾ, ಎರಡನೇ ಡೋಸ್ 91 ಶೇಕಡಾ ಮತ್ತು 15ವರ್ಷ ಮೇಲ್ಪಟ್ಟವರಿಗೆ 85 ಶೇಕಡಾ ಲಸಿಕೆ ನೀಡಲಾಗಿದೆ. ಇದರೊಂದಿಗೆ ಸುಮಾರು 72 ಸಾವಿರ ಮಕ್ಕಳಿಗೆ ಕೋರ್ಬೇ ವ್ಯಾಕ್ಸ್ ಲಸಿಕೆ ನೀಡುವ ಸಲುವಾಗಿ ಶಾಲೆಗಳಲ್ಲೂ ಲಸಿಕಾ ಅಭಿಯಾನ ಆರಂಭಿಸಲಾಗುವುದು. ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಮುನ್ನೆಚ್ಚರಿಕಾ ಲಸಿಕೆ ನೀಡುವ ಕೆಲಸಗಳಾಗುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಸಿಬ್ಬಂದಿಗಳು ಕೂಡ ಕಡ್ಡಾಯವಾಗಿ ಮುನ್ನೆಚ್ಚರಿಕಾ ಲಸಿಕೆ ಪಡೆದುಕೊಳ್ಳಬೇಕು. ಲಸಿಕೆಯ ಬಗ್ಗೆ ಜನರಲ್ಲಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಿ ಜಿಲ್ಲೆಯಾದ್ಯಂತ ಎಲ್ಲಾ ವಯೋಮಾನದವರಿಗೂ ಶೇಕಡಾ 100ರಷ್ಟು ಲಸಿಕೆ ನೀಡಲು ಯಶಸ್ವಿಯಾಗಿ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶ್ರಮಿಸುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಸರ್ಜನ್ ಡಾ. ಸದಾಶಿವ ಶಾನ್ ಬೋಗ್, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಜ್ಯೋತಿ ಕುಮಾರಿ, ಆರ್.ಸಿ.ಎಚ್. ಡಾ. ರಾಜೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ಸೇರಿದಂತೆ ಇತರೆ ವೈದ್ಯಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

9 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

10 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

10 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

10 hours ago

ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ

2025 ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ…

11 hours ago