Advertisement
ಸುದ್ದಿಗಳು

ಶಾಲೆಗಳಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ : ಜಿಲ್ಲಾಧಿಕಾರಿ

Share

ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು.

ಅವರು ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್‌ ವಿಭಾಗದಲ್ಲಿ ಮಾ.16ರ ಬುಧವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಕೋರ್ಬೇ ವ್ಯಾಕ್ಸ್ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಮುನ್ನೆಚ್ಚರಿಕಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಾದ್ಯಂತ ಲಸಿಕೆಗಳು ಲಭ್ಯವಿದ್ದು, ಈಗಾಗಲೇ ಜನರು ಎಚ್ಚೆತ್ತುಕೊಂಡು ಲಸಿಕೆಗಳನ್ನು ಪಡೆದರೆ ಮುಂಬರುವ ಕೋವಿಡ್ ಸೋಂಕಿನ ಅಪಾಯಗಳಿಂದ ಪಾರಾಗಬಹುದು ಎಂದು ಕಿವಿ ಮಾತು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಮೊದಲನೇ ಡೋಸ್ 100 ಶೇಕಡಾ, ಎರಡನೇ ಡೋಸ್ 91 ಶೇಕಡಾ ಮತ್ತು 15ವರ್ಷ ಮೇಲ್ಪಟ್ಟವರಿಗೆ 85 ಶೇಕಡಾ ಲಸಿಕೆ ನೀಡಲಾಗಿದೆ. ಇದರೊಂದಿಗೆ ಸುಮಾರು 72 ಸಾವಿರ ಮಕ್ಕಳಿಗೆ ಕೋರ್ಬೇ ವ್ಯಾಕ್ಸ್ ಲಸಿಕೆ ನೀಡುವ ಸಲುವಾಗಿ ಶಾಲೆಗಳಲ್ಲೂ ಲಸಿಕಾ ಅಭಿಯಾನ ಆರಂಭಿಸಲಾಗುವುದು. ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಮುನ್ನೆಚ್ಚರಿಕಾ ಲಸಿಕೆ ನೀಡುವ ಕೆಲಸಗಳಾಗುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಸಿಬ್ಬಂದಿಗಳು ಕೂಡ ಕಡ್ಡಾಯವಾಗಿ ಮುನ್ನೆಚ್ಚರಿಕಾ ಲಸಿಕೆ ಪಡೆದುಕೊಳ್ಳಬೇಕು. ಲಸಿಕೆಯ ಬಗ್ಗೆ ಜನರಲ್ಲಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಿ ಜಿಲ್ಲೆಯಾದ್ಯಂತ ಎಲ್ಲಾ ವಯೋಮಾನದವರಿಗೂ ಶೇಕಡಾ 100ರಷ್ಟು ಲಸಿಕೆ ನೀಡಲು ಯಶಸ್ವಿಯಾಗಿ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶ್ರಮಿಸುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಸರ್ಜನ್ ಡಾ. ಸದಾಶಿವ ಶಾನ್ ಬೋಗ್, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಜ್ಯೋತಿ ಕುಮಾರಿ, ಆರ್.ಸಿ.ಎಚ್. ಡಾ. ರಾಜೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ಸೇರಿದಂತೆ ಇತರೆ ವೈದ್ಯಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

3 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

5 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

6 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

20 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

21 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

22 hours ago