ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆ | ವೈಷ್ಣೋದೇವಿ ದೇಗುಲದ ತೀರ್ಥಯಾತ್ರೆ ಮುಂದೂಡಿಕೆ

September 16, 2025
6:55 AM

ಜಮ್ಮು ಮತ್ತು ಕಾಶ್ಮೀರದಲ್ಲಿ  ನಿರಂತರ ಮಳೆಯಾಗುತ್ತಿದ್ದು,  ಪ್ರಸಿದ್ಧ   ಶ್ರೀಮಾತಾ ವೈಷ್ಣೋದೇವಿ  ದೇಗುಲದ   ತೀರ್ಥಯಾತ್ರೆಯನ್ನು  ಮುಂದೂಡಲಾಗಿದೆ. ಹಲವು ದಿನಗಳಿಂದ   ಸ್ಥಗಿತಗೊಂಡಿದ್ದ  ಈ ತೀರ್ಥಯಾತ್ರೆಯನ್ನು  ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ರಿಯಾಸಿ ಜಿಲ್ಲೆಯಲ್ಲಿ  ನಿರಂತರ ಮಳೆಯಾಗುತ್ತಿರುವುದರಿಂದ   ಈ ತೀರ್ಥಯಾತ್ರೆಯನ್ನು  ಮುಂದಿನ ಆದೇಶದ ವರೆಗೆ   ಮುಂದೂಡಲಾಗಿದೆ ಎಂದು   ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯು  ತನ್ನ ಅಧಿಕೃತ  ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ  ತಿಳಿಸಿದೆ. ಯಾತ್ರಾರ್ಥಿಗಳ  ಸುರಕ್ಷತೆ ಹಾಗೂ ಭದ್ರತೆಯ ಕಾರಣದಿಂದ  ಈ ನಿರ್ಧಾರಕ್ಕೆ  ಬರಲಾಗಿದೆ. ಭಾರೀ ಮಳೆಯ ಕಾರಣದಿಂದ  ದೇಗುಲಕ್ಕೆ ಹೋಗುವ ಮಾರ್ಗಗಳಲ್ಲಿ  ಬೃಹತ್‌  ಭೂಕುಸಿತ ಉಂಟಾಗಿದ್ದರಿಂದ  ಕಳೆದ ತಿಂಗಳ  26 ರಂದು   ಗುಹಾ ದೇಗುಲದ   ಪವಿತ್ರ ತೀರ್ಥಯಾತ್ರೆಯನ್ನು   ತಾತ್ಕಾಲಿಕವಾಗಿ   ಸ್ಥಗಿತಗೊಳಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ
May 4, 2026
2:57 PM
by: ದ ರೂರಲ್ ಮಿರರ್.ಕಾಂ
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು
May 4, 2026
7:58 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!
May 4, 2026
7:35 AM
by: ಮಿರರ್‌ ಡೆಸ್ಕ್
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!
May 3, 2026
10:27 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror