ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಸಿದ್ಧ ಶ್ರೀಮಾತಾ ವೈಷ್ಣೋದೇವಿ ದೇಗುಲದ ತೀರ್ಥಯಾತ್ರೆಯನ್ನು ಮುಂದೂಡಲಾಗಿದೆ. ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಈ ತೀರ್ಥಯಾತ್ರೆಯನ್ನು ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ರಿಯಾಸಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಈ ತೀರ್ಥಯಾತ್ರೆಯನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ. ಯಾತ್ರಾರ್ಥಿಗಳ ಸುರಕ್ಷತೆ ಹಾಗೂ ಭದ್ರತೆಯ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಭಾರೀ ಮಳೆಯ ಕಾರಣದಿಂದ ದೇಗುಲಕ್ಕೆ ಹೋಗುವ ಮಾರ್ಗಗಳಲ್ಲಿ ಬೃಹತ್ ಭೂಕುಸಿತ ಉಂಟಾಗಿದ್ದರಿಂದ ಕಳೆದ ತಿಂಗಳ 26 ರಂದು ಗುಹಾ ದೇಗುಲದ ಪವಿತ್ರ ತೀರ್ಥಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…