ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…