ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…