ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…