ಅನೂಚಾನ ವಿದ್ಯಾ ಪ್ರತಿಷ್ಟಾನ ಹಾಗೂ ಗುತ್ತಿಗಾರು ಹವ್ಯಕ ವಲಯ ಪರಿಷತ್ತು ಆಶ್ರಯದಲ್ಲಿ ಗುತ್ತಿಗಾರು ಗ್ರಾಮದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಗಾಯಂತ್ರಿ ಯಜ್ಞದ ಪ್ರಾರಂಭ ಹಾಗೂ ವಸಂತ ವೇದ ಶಿಬಿರ ಉದ್ಘಾಟನೆಗೊಂಡಿತು. ವೇ.ಮೂ ಕರುವಜೆ ಕೇಶವ ಜೋಯಿಸರು ವೇದ ಶಿಬಿರ ಉದ್ಘಾಟಿಸಿದರು.
ವೇದ ಶಿಬಿರ ಉದ್ಘಾಟಿಸಿದ ವೇ.ಮೂ ಕರುವಜೆ ಕೇಶವ ಜೋಯಿಸರು, ವೇದಾಧ್ಯಯನದ ಮೂಲಕ ಮಕ್ಕಳು ಅರಿವನ್ನು ಹೆಚ್ಚು ಮಾಡಿಕೊಳ್ಳಬೇಕು. ಸಂಸ್ಕಾರ ಎಂದರೆ ಜೀವನ ಪಾಠವಾಗಿದೆ. ಪ್ರತೀ ವಿದ್ಯಾರ್ಥಿಗಳೂ ಸಂಸ್ಕಾರದ ಕಡೆಗೂ ಗಮನಹರಿಸಬೇಕು ಎಂದರು.
ಅನೂಚಾನ ವಿದ್ಯಾ ಪ್ರತಿಷ್ಟಾನದ ಅಧ್ಯಕ್ಷ ಶ್ರೀಕೃಷ್ಣ ಭಟ್ ಗುಂಡಿಮಜಲು ಅಧ್ಯಕ್ಷತೆ ವಹಿಸಿದ್ದರು. ವೇದ ಶಿಬಿರದ ಮುಖ್ಯಗುರುಗಳಾದ ಮಹಾಬಲೇಶ್ವರ ಭಟ್ ಪಿ ವಿ ಉಪಸ್ಥಿತರಿದ್ದರು. ಅನೂಚಾನ ವಿದ್ಯಾ ಪ್ರತಿಷ್ಟಾನದ ಕಾರ್ಯದರ್ಶಿ ಸುಬ್ರಹ್ಮಣ್ಯ ಭಟ್ ಜೀರ್ಮುಕಿ ಕಾರ್ಯಕ್ರಮ ನಿರ್ವಹಿಸಿದರು.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…