ಎ.9 : ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಗೌರವಾರ್ಪಣೆ |

April 4, 2023
1:08 PM

ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಎ.9 ರಂದು  ಭಾನುವಾರ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.

Advertisement
Advertisement

ಕಳೆದ ಎರಡು ವರ್ಷಗಳಿಂದ ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ಯಕ್ಷಗಾನ ಬಯಲಾಟ ನಡೆಸಲಾಗುತ್ತಿದೆ. ಕಲಾಸೇವೆ ಹಾಗೂ ಕಲಾವಿದರಿಗೆ ಪ್ರೋತ್ಸಾಹದ ಉದ್ದೇಶದಿಂದ ನಡೆಸಲಾಗುತ್ತಿರುವ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ  ಈ ಬಾರಿ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಮೇಳದ ವತಿಯಿಂದ ಶ್ರೀ ದೇವಿ ಲಲಿತೋಪಾಖ್ಯಾನ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಇದೇ ಸಂದರ್ಭ ಕಲಾವಿದರಿಗೆ ಗೌರವಾರ್ಪಣೆ ಕೂಡಾ ನಡೆಯಲಿದೆ. ಈ ಬಾರಿ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.  ಪಾವಂಜೆ ಮೇಳದ ಸಂಚಾಲಕ, ಪ್ರಸಿದ್ಧ ಭಾಗವತ ಯಕ್ಷಧ್ರುವ ಸತೀಶ್‌ ಶೆಟ್ಟಿ ಪಟ್ಲ ಅವರು ಯಕ್ಷಗಾನ ಕಲಾಭಿಮಾನಿ ಮಿತ್ರರ ಪರವಾಗಿ ಗೌರವಾರ್ಪಣೆ ನಡೆಸಲಿದ್ದಾರೆ.

ರಾಮಕೃಷ್ಣ ರಾವ್ ಇವರು ಸುಳ್ಯ ತಾಲೂಕು ಮರ್ಕಂಜ ಗ್ರಾಮದ ರೆಂಜಾಳ ಎಂಬಲ್ಲಿ ದಿ.ವೆಂಕಟರಮಣಯ್ಯ ಹಾಗೂ ಯಮುನಮ್ಮ ದಂಪತಿ ಪ್ರಥಮ ಪುತ್ರರಾಗಿ  ಜನಿಸಿದರು. ಪ್ರೌಢಶಾಲಾ ಶಿಕ್ಷಣದ ಬಳಿಕ ಹೆಸರಾಂತ ಕಲಾವಿದರಾದ ಕುದ್ಕಾಡಿ ವಿಶ್ವನಾಥ ರೈ ಗಳಲ್ಲಿ ಭರತನಾಟ್ಯದ ಪ್ರಾಥಮಿಕ ಶಿಕ್ಷಣವನ್ನು ಪಡೆದರು. ಯಕ್ಷಗಾನ ಆಟ-ಕೂಟಗಳ ವಾತಾವರಣದಿಂದ ಪ್ರಭಾವಿತರಾಗಿ ಯಕ್ಷಗಾನ ಕಲೆಯ ಸೆಳೆತಕ್ಕೆ ಒಳಗಾದರು. ಅಗರಿ ಶ್ರೀನಿವಾಸ ಭಾಗವತರ ಆಶೀರ್ವಾದದೊಂದಿಗೆ ಪ್ರಪ್ರಥಮವಾಗಿ ಕೂಡ್ಲು ಮೇಳದಲ್ಲಿ ಗೆಜ್ಜೆ ಕಟ್ಟಿ ವೃತ್ತಿ ರಂಗಕ್ಕೆ ಪಾದಾರ್ಪಣೆ ಮಾಡಿ ಬಳಿಕ ಹಂತ ಹಂತವಾಗಿ ಯಕ್ಷಗಾನ ನಾಟ್ಯ ಕಲೆಯಲ್ಲಿ ಪ್ರಭುತ್ವ ಸಾಧಿಸಿದರು.

ಕೂಡ್ಲು, ಮಡಿಕೇರಿ ಮೇಳಗಲ್ಲಿ 5 ವರ್ಷ, ಹವ್ಯಾಸಿಯಾಗಿ 3 ವರ್ಷ ಅನುಭವ ಗಳಿಸಿದ ಇವರು ಸುಮಾರು 40 ವರ್ಷಗಳ ಕಾಲ ಶ್ರೀ ಕಟೀಲು ಮೇಳದ ಪ್ರಧಾನ ಕಲಾವಿದರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದರು. ಶ್ರೀ ದೇವಿ, ಸುಭದ್ರೆ, ದಮಯಂತಿ, ಯಶೋಧೆ, ಹಿರಣ್ಯಾಕ್ಷ, ಇಂದ್ರಜಿತು, ದೇವೇಂದ್ರ, ಪಂಡಿತ, ವಿಜಯ, ಮಕರಂದ, ದಕ್ಷ, ಕೊರವಂಜಿ ಹೀಗೆ, ವೈವಿಧ್ಯಮಯ ಪಾತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡವರು.

Advertisement
ಪರಂಪರಾಗತ ಶೈಲಿಯ ಬಣ್ಣಗಾರಿಕೆ ಹಾಗೂ ನಾಟ್ಯ ವಿಧಾನದ ಸಂಪನ್ಮೂಲವಾಗಿ ಗುರುತಿಸಲ್ಪಟ್ಟಿರುವುದು ಇವರ ಕಲಾ ನೈಪುಣ್ಯತೆಗೆ ಸಾಕ್ಷಿ. ಶ್ರೀ ಕಟೀಲು ಅಸ್ರಣ್ಣ ಪ್ರಶಸ್ತಿ, ಮುಂಚೂರು ನಾರಾಯಣ ಭಟ್ ಪ್ರಶಸ್ತಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಸಿರಿ ಪ್ರಶಸ್ತಿಗಳೇ ಮೊದಲಾದ ಪ್ರತಿಷ್ಠಿತ ಪ್ರಶಸ್ತಿಗಳಲ್ಲದೆ ನೂರಕ್ಕೂ ಹೆಚ್ಚಿನ ಸನ್ಮಾನಗಳಿಗೆ ಭಾಜನರಾಗಿರುವುದು ಇವರ ಶ್ರೇಷ್ಠತೆಯ ದ್ಯೋತಕವಾಗಿದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ
June 7, 2025
1:48 PM
by: ಸಾಯಿಶೇಖರ್ ಕರಿಕಳ
ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!
June 7, 2025
6:58 AM
by: ದ ರೂರಲ್ ಮಿರರ್.ಕಾಂ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group