Advertisement
ಸುದ್ದಿಗಳು

ಎ.9 : ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಗೌರವಾರ್ಪಣೆ |

Share

ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಎ.9 ರಂದು  ಭಾನುವಾರ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.

ಕಳೆದ ಎರಡು ವರ್ಷಗಳಿಂದ ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ಯಕ್ಷಗಾನ ಬಯಲಾಟ ನಡೆಸಲಾಗುತ್ತಿದೆ. ಕಲಾಸೇವೆ ಹಾಗೂ ಕಲಾವಿದರಿಗೆ ಪ್ರೋತ್ಸಾಹದ ಉದ್ದೇಶದಿಂದ ನಡೆಸಲಾಗುತ್ತಿರುವ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ  ಈ ಬಾರಿ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಮೇಳದ ವತಿಯಿಂದ ಶ್ರೀ ದೇವಿ ಲಲಿತೋಪಾಖ್ಯಾನ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಇದೇ ಸಂದರ್ಭ ಕಲಾವಿದರಿಗೆ ಗೌರವಾರ್ಪಣೆ ಕೂಡಾ ನಡೆಯಲಿದೆ. ಈ ಬಾರಿ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.  ಪಾವಂಜೆ ಮೇಳದ ಸಂಚಾಲಕ, ಪ್ರಸಿದ್ಧ ಭಾಗವತ ಯಕ್ಷಧ್ರುವ ಸತೀಶ್‌ ಶೆಟ್ಟಿ ಪಟ್ಲ ಅವರು ಯಕ್ಷಗಾನ ಕಲಾಭಿಮಾನಿ ಮಿತ್ರರ ಪರವಾಗಿ ಗೌರವಾರ್ಪಣೆ ನಡೆಸಲಿದ್ದಾರೆ.

ರಾಮಕೃಷ್ಣ ರಾವ್ ಇವರು ಸುಳ್ಯ ತಾಲೂಕು ಮರ್ಕಂಜ ಗ್ರಾಮದ ರೆಂಜಾಳ ಎಂಬಲ್ಲಿ ದಿ.ವೆಂಕಟರಮಣಯ್ಯ ಹಾಗೂ ಯಮುನಮ್ಮ ದಂಪತಿ ಪ್ರಥಮ ಪುತ್ರರಾಗಿ  ಜನಿಸಿದರು. ಪ್ರೌಢಶಾಲಾ ಶಿಕ್ಷಣದ ಬಳಿಕ ಹೆಸರಾಂತ ಕಲಾವಿದರಾದ ಕುದ್ಕಾಡಿ ವಿಶ್ವನಾಥ ರೈ ಗಳಲ್ಲಿ ಭರತನಾಟ್ಯದ ಪ್ರಾಥಮಿಕ ಶಿಕ್ಷಣವನ್ನು ಪಡೆದರು. ಯಕ್ಷಗಾನ ಆಟ-ಕೂಟಗಳ ವಾತಾವರಣದಿಂದ ಪ್ರಭಾವಿತರಾಗಿ ಯಕ್ಷಗಾನ ಕಲೆಯ ಸೆಳೆತಕ್ಕೆ ಒಳಗಾದರು. ಅಗರಿ ಶ್ರೀನಿವಾಸ ಭಾಗವತರ ಆಶೀರ್ವಾದದೊಂದಿಗೆ ಪ್ರಪ್ರಥಮವಾಗಿ ಕೂಡ್ಲು ಮೇಳದಲ್ಲಿ ಗೆಜ್ಜೆ ಕಟ್ಟಿ ವೃತ್ತಿ ರಂಗಕ್ಕೆ ಪಾದಾರ್ಪಣೆ ಮಾಡಿ ಬಳಿಕ ಹಂತ ಹಂತವಾಗಿ ಯಕ್ಷಗಾನ ನಾಟ್ಯ ಕಲೆಯಲ್ಲಿ ಪ್ರಭುತ್ವ ಸಾಧಿಸಿದರು.

ಕೂಡ್ಲು, ಮಡಿಕೇರಿ ಮೇಳಗಲ್ಲಿ 5 ವರ್ಷ, ಹವ್ಯಾಸಿಯಾಗಿ 3 ವರ್ಷ ಅನುಭವ ಗಳಿಸಿದ ಇವರು ಸುಮಾರು 40 ವರ್ಷಗಳ ಕಾಲ ಶ್ರೀ ಕಟೀಲು ಮೇಳದ ಪ್ರಧಾನ ಕಲಾವಿದರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದರು. ಶ್ರೀ ದೇವಿ, ಸುಭದ್ರೆ, ದಮಯಂತಿ, ಯಶೋಧೆ, ಹಿರಣ್ಯಾಕ್ಷ, ಇಂದ್ರಜಿತು, ದೇವೇಂದ್ರ, ಪಂಡಿತ, ವಿಜಯ, ಮಕರಂದ, ದಕ್ಷ, ಕೊರವಂಜಿ ಹೀಗೆ, ವೈವಿಧ್ಯಮಯ ಪಾತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡವರು.
ಪರಂಪರಾಗತ ಶೈಲಿಯ ಬಣ್ಣಗಾರಿಕೆ ಹಾಗೂ ನಾಟ್ಯ ವಿಧಾನದ ಸಂಪನ್ಮೂಲವಾಗಿ ಗುರುತಿಸಲ್ಪಟ್ಟಿರುವುದು ಇವರ ಕಲಾ ನೈಪುಣ್ಯತೆಗೆ ಸಾಕ್ಷಿ. ಶ್ರೀ ಕಟೀಲು ಅಸ್ರಣ್ಣ ಪ್ರಶಸ್ತಿ, ಮುಂಚೂರು ನಾರಾಯಣ ಭಟ್ ಪ್ರಶಸ್ತಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಸಿರಿ ಪ್ರಶಸ್ತಿಗಳೇ ಮೊದಲಾದ ಪ್ರತಿಷ್ಠಿತ ಪ್ರಶಸ್ತಿಗಳಲ್ಲದೆ ನೂರಕ್ಕೂ ಹೆಚ್ಚಿನ ಸನ್ಮಾನಗಳಿಗೆ ಭಾಜನರಾಗಿರುವುದು ಇವರ ಶ್ರೇಷ್ಠತೆಯ ದ್ಯೋತಕವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

1 hour ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

9 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

10 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

11 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago