Advertisement
ಸುದ್ದಿಗಳು

ಎ.9 : ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಅವರಿಗೆ ಗೌರವಾರ್ಪಣೆ |

Share

ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಎ.9 ರಂದು  ಭಾನುವಾರ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.

ಕಳೆದ ಎರಡು ವರ್ಷಗಳಿಂದ ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ಯಕ್ಷಗಾನ ಬಯಲಾಟ ನಡೆಸಲಾಗುತ್ತಿದೆ. ಕಲಾಸೇವೆ ಹಾಗೂ ಕಲಾವಿದರಿಗೆ ಪ್ರೋತ್ಸಾಹದ ಉದ್ದೇಶದಿಂದ ನಡೆಸಲಾಗುತ್ತಿರುವ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ  ಈ ಬಾರಿ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಮೇಳದ ವತಿಯಿಂದ ಶ್ರೀ ದೇವಿ ಲಲಿತೋಪಾಖ್ಯಾನ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಇದೇ ಸಂದರ್ಭ ಕಲಾವಿದರಿಗೆ ಗೌರವಾರ್ಪಣೆ ಕೂಡಾ ನಡೆಯಲಿದೆ. ಈ ಬಾರಿ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.  ಪಾವಂಜೆ ಮೇಳದ ಸಂಚಾಲಕ, ಪ್ರಸಿದ್ಧ ಭಾಗವತ ಯಕ್ಷಧ್ರುವ ಸತೀಶ್‌ ಶೆಟ್ಟಿ ಪಟ್ಲ ಅವರು ಯಕ್ಷಗಾನ ಕಲಾಭಿಮಾನಿ ಮಿತ್ರರ ಪರವಾಗಿ ಗೌರವಾರ್ಪಣೆ ನಡೆಸಲಿದ್ದಾರೆ.

ರಾಮಕೃಷ್ಣ ರಾವ್ ಇವರು ಸುಳ್ಯ ತಾಲೂಕು ಮರ್ಕಂಜ ಗ್ರಾಮದ ರೆಂಜಾಳ ಎಂಬಲ್ಲಿ ದಿ.ವೆಂಕಟರಮಣಯ್ಯ ಹಾಗೂ ಯಮುನಮ್ಮ ದಂಪತಿ ಪ್ರಥಮ ಪುತ್ರರಾಗಿ  ಜನಿಸಿದರು. ಪ್ರೌಢಶಾಲಾ ಶಿಕ್ಷಣದ ಬಳಿಕ ಹೆಸರಾಂತ ಕಲಾವಿದರಾದ ಕುದ್ಕಾಡಿ ವಿಶ್ವನಾಥ ರೈ ಗಳಲ್ಲಿ ಭರತನಾಟ್ಯದ ಪ್ರಾಥಮಿಕ ಶಿಕ್ಷಣವನ್ನು ಪಡೆದರು. ಯಕ್ಷಗಾನ ಆಟ-ಕೂಟಗಳ ವಾತಾವರಣದಿಂದ ಪ್ರಭಾವಿತರಾಗಿ ಯಕ್ಷಗಾನ ಕಲೆಯ ಸೆಳೆತಕ್ಕೆ ಒಳಗಾದರು. ಅಗರಿ ಶ್ರೀನಿವಾಸ ಭಾಗವತರ ಆಶೀರ್ವಾದದೊಂದಿಗೆ ಪ್ರಪ್ರಥಮವಾಗಿ ಕೂಡ್ಲು ಮೇಳದಲ್ಲಿ ಗೆಜ್ಜೆ ಕಟ್ಟಿ ವೃತ್ತಿ ರಂಗಕ್ಕೆ ಪಾದಾರ್ಪಣೆ ಮಾಡಿ ಬಳಿಕ ಹಂತ ಹಂತವಾಗಿ ಯಕ್ಷಗಾನ ನಾಟ್ಯ ಕಲೆಯಲ್ಲಿ ಪ್ರಭುತ್ವ ಸಾಧಿಸಿದರು.

ಕೂಡ್ಲು, ಮಡಿಕೇರಿ ಮೇಳಗಲ್ಲಿ 5 ವರ್ಷ, ಹವ್ಯಾಸಿಯಾಗಿ 3 ವರ್ಷ ಅನುಭವ ಗಳಿಸಿದ ಇವರು ಸುಮಾರು 40 ವರ್ಷಗಳ ಕಾಲ ಶ್ರೀ ಕಟೀಲು ಮೇಳದ ಪ್ರಧಾನ ಕಲಾವಿದರಲ್ಲಿ ಒಬ್ಬರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದರು. ಶ್ರೀ ದೇವಿ, ಸುಭದ್ರೆ, ದಮಯಂತಿ, ಯಶೋಧೆ, ಹಿರಣ್ಯಾಕ್ಷ, ಇಂದ್ರಜಿತು, ದೇವೇಂದ್ರ, ಪಂಡಿತ, ವಿಜಯ, ಮಕರಂದ, ದಕ್ಷ, ಕೊರವಂಜಿ ಹೀಗೆ, ವೈವಿಧ್ಯಮಯ ಪಾತ್ರಗಳಲ್ಲಿ ಪ್ರೇಕ್ಷಕರ ಮನಸೂರೆಗೊಂಡವರು.
ಪರಂಪರಾಗತ ಶೈಲಿಯ ಬಣ್ಣಗಾರಿಕೆ ಹಾಗೂ ನಾಟ್ಯ ವಿಧಾನದ ಸಂಪನ್ಮೂಲವಾಗಿ ಗುರುತಿಸಲ್ಪಟ್ಟಿರುವುದು ಇವರ ಕಲಾ ನೈಪುಣ್ಯತೆಗೆ ಸಾಕ್ಷಿ. ಶ್ರೀ ಕಟೀಲು ಅಸ್ರಣ್ಣ ಪ್ರಶಸ್ತಿ, ಮುಂಚೂರು ನಾರಾಯಣ ಭಟ್ ಪ್ರಶಸ್ತಿ, ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಕನ್ನಡ ಸಿರಿ ಪ್ರಶಸ್ತಿಗಳೇ ಮೊದಲಾದ ಪ್ರತಿಷ್ಠಿತ ಪ್ರಶಸ್ತಿಗಳಲ್ಲದೆ ನೂರಕ್ಕೂ ಹೆಚ್ಚಿನ ಸನ್ಮಾನಗಳಿಗೆ ಭಾಜನರಾಗಿರುವುದು ಇವರ ಶ್ರೇಷ್ಠತೆಯ ದ್ಯೋತಕವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

45 minutes ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

13 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

14 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

20 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago