Advertisement
MIRROR FOCUS

ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |

Share

ಗುತ್ತಿಗಾರಿನ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ಹನುಮಗಿರಿ ಮೇಳದಿಂದ “ಪಾರಿಜಾತ-ಅಕ್ಷಯಾಂಬರ-ಕುಶಲವ” ಯಕ್ಷಗಾನ ಬಯಲಾಟವು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಡಿ.31 ರಂದು ನಡೆಯಲಿದೆ. ಈ ಸಂದರ್ಭ ಹಿರಿಯ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ ನಡೆಯಲಿದೆ.…..ಮುಂದೆ ಓದಿ….

ಹಿರಿಯ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರು ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ  ಸಿದ್ಧಕಟ್ಟೆಯವರು. ಸಿದ್ಧಕಟ್ಟೆ ಸೈಂಟ್ ಮೆಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿದ ಬಳಿಕ  ರೆಂಜಾಳ ರಾಮಕೃಷ್ಣ ರಾವ್ , ಬಣ್ಣದ ಮಹಾಲಿಂಗ ಯಕ್ಷಗಾನ ಕಲಿತರು. ಬಳಿಕ ಇರಾ ಗೋಪಾಲಕೃಷ್ಣ ಭಾಗವತ, ಸುಣ್ಣಂಬಳ ವಿಶ್ವೇಶ್ವರ ಭಟ್, ಬೆಳ್ಳಾರೆ ಮಂಜುನಾಥ ಭಟ್ ಮತ್ತು ಹಿರಿಯ ಕಲಾವಿದರಿಂದ ಇನ್ನಷ್ಟು ಯಕ್ಷಗಾನದ ಕಲಿಕೆಯನ್ನು ಮಾಡಿದರು. ಈಗ ವಿದ್ಯಾರ್ಥಿಗಳಿಗೆ ಯಕ್ಷಗಾನದ ತರಬೇತಿಯನ್ನೂ ನೀಡುತ್ತಿದ್ದಾರೆ.

2 ವರ್ಷ ಕಟೀಲು 2ನೇ ಮೇಳದಲ್ಲಿ ನೇಪಥ್ಯ ಕಲಾವಿದನಾಗಿ ತಿರುಗಾಟ, ಕಟೀಲು 1ನೇ ಮೇಳದಲ್ಲಿ 8 ವರ್ಷಗಳ ಕಾಲ ಬಣ್ಣದ ವೇಷಧಾರಿಯಾಗಿ  ತಿರುಗಾಟ, ಆಮೇಲೆ 13 ವರ್ಷಗಳ ಕಾಲ ಧರ್ಮಸ್ಥಳ ಮೇಳದಲ್ಲಿ ಬಣ್ಣದ ವೇಷಧಾರಿಯಾಗಿ ತಿರುಗಾಟ. ನಂತರದ ಈ ಹದಿಮೂರು ವರ್ಷಗಳಲ್ಲಿ ಹೊಸನಗರ, ಎಡನೀರು ಮತ್ತು ಈಗ ಹನುಮಗಿರಿ ಮೇಳಗಳಲ್ಲಿ ಕಲಾವಿದರಾಗಿದ್ದಾರೆ. ಆಂಧ್ರಪ್ರದೇಶ, ತಮಿಳುನಾಡು, ದೆಹಲಿ, ಅಯೋಧ್ಯೆ, ಕಾಶಿ, ಕೋಲ್ಕತ್ತಾ, ಕೇರಳ, ಹರಿದ್ವಾರ ಮೊದಲಾದೆಡೆ ನಡೆದ ಪ್ರದರ್ಶನಗಳಲ್ಲಿ ಭಾಗವಹಿಸಿ ಕಲಾಸೇವೆ ಮಾಡಿದ್ದಾರೆ.

ಇದುವರೆಗೆ ಪೇಜಾವರ ಶ್ರೀಗಳ ಜನುಮದಿನದ ಶ್ರೀರಾಮ ವಿಠಲ ಪ್ರಶಸ್ತಿ, ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಅರಸಂಕಲ ಪ್ರಶಸ್ತಿಗಳನ್ನು ಪಡೆದುದಲ್ಲದೆ ಹರೇಕಳ ಪಾವೂರು, ಬಿ. ಸಿ. ರೋಡಿನಲ್ಲಿ ಅಲ್ಲದೆ  ಇನ್ನೂ ಅನೇಕ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ.

ಗುತ್ತಿಗಾರಿನ ಯಕ್ಷಕಲಾಭಿಮಾನಿ ಮಿತ್ರರು ಕಳೆದ 4 ವರ್ಷಗಳಿಂದ ಯಕ್ಷಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದು ಸತತ ನಾಲ್ಕು ವರ್ಷಗಳಲ್ಲಿ ಕಲಾಸೇವೆಯ ಸಂದರ್ಭ ಕಲಾವಿದರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ಹಿಂದೆ  ಹಿರಿಯ ಕಲಾವಿದ  ದಿವಂಗತ ಸೂರ್ಯನಾರಾಯಣ ಪಂಜಾಜೆ, ಹಿಮ್ಮೇಳ ವಾದಕರಾದ ಕುಮಾರ ಸುಬ್ರಹ್ಮಣ್ಯ ವಳಕುಂಜ, ಹಿರಿಯ ವೇಷದಾರಿಗಳಾದ ರೆಂಜಾಳ ರಾಮಕೃಷ್ಣ ರಾವ್ ಹಾಗು ಉಬರಡ್ಕ ಉಮೇಶ ಶೆಟ್ಟಿ ಇವರನ್ನು ಗೌರವಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

36 minutes ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago