Advertisement
Opinion

ಗೇರುಹಣ್ಣಿನ ಮೌಲ್ಯವರ್ಧನೆ | ಕೇರಳ ಕೃಷಿ ವಿವಿ ಸಾಧನೆ

Share

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ (Value addition) ಮಾಡಿದಾಗ ಮಾತ್ರ! ಈ ನಿಟ್ಟಿನಲ್ಲಿ ಕೇರಳದ ಸಂಶೋಧನಾ ಸಂಸ್ಥೆಯೊಂದು(Research Institute of Kerala) ಮಾಡಿದ ಕೆಲಸಗಳ ವಿವರಗಳಿಲ್ಲಿವೆ..

“ಗೇರುಹಣ್ಣಿನಲ್ಲಿರುವ ಗಂಟಲು ಕೆರೆತ ಉಂಟುಮಾಡುವ ಅಂಶ – ಟ್ಯಾನಿನ್(Tannin)- ತೆಗೆಯುವ ವಿಧಾನ, ಹಣ್ಣನ್ನು ಜ್ಯೂಸ್(Juice) ಮಾಡುವ ಹಾಗೂ ಕಾಪಿಡುವ ವಿಧಾನಗಳನ್ನು ನಮ್ಮ ಸಂಸ್ಥೆ ಅಭಿವೃದ್ಧಿಪಡಿಸಿದೆ. ಗೇರುಹಣ್ಣಿನಿಂದ ಮೂವತ್ತಕ್ಕೂ ಹೆಚ್ಚು ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸಿದ್ದೇವೆ” ಎನ್ನುತ್ತಾರೆ ಡಾ. ಜಲಜಾ ಮೆನೋನ್. ಇವರು ಕೇರಳದ ತ್ರಿಶೂರಿನ ಸಮೀಪ ಮಾಡಕ್ಕತರ ಎಂಬಲ್ಲಿರುವ ಗೇರು ಸಂಶೋಧನಾ ಕೇಂದ್ರದ ಮುಖ್ಯಸ್ಥರು. ಈ ಸಂಸ್ಥೆ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರ, ಪುತ್ತೂರಿನಡಿಯಲ್ಲಿರುವ ರಾಷ್ಟ್ರವ್ಯಾಪಿ ಗೇರು ಸಂಶೋಧನಾ ಸಮನ್ವಯ ಕೇಂದ್ರಗಳ ಪೈಕಿ ಒಂದು. ಕೇರಳ ಕೃಷಿ ವಿಶ್ವವಿದ್ಯಾಯಲದಡಿಯಲ್ಲಿ ಕೆಲಸ ನಿರ್ವಹಿಸುವ ಈ ಕೇಂದ್ರ ಗೇರುಹಣ್ಣಿನ ಮೌಲ್ಯವರ್ಧನೆಯಲ್ಲಿ ಮುಂಚೂಣಿಯಲ್ಲಿದೆ. ಬಹುಷ: ದೇಶದ ಯಾವುದೇ ಸಂಸ್ಥೆ ಮಾಡದಷ್ಟು ಕೆಲಸ ಈ ಕೇಂದ್ರ ಮಾಡಿದೆ.

ಸಂಸ್ಥೆಗೆ ಭೇಟಿ ನೀಡಿದಾಗ ಇತ್ತೀಚೆಗಷ್ಟೇ ಬಿಡುಗಡೆಯಾದ ಗೇರುಹಣ್ಣಿನ ಟಾಫಿಯನ್ನು ನೀಡಿ'”ಇದು ಕೇರಳದಲ್ಲಿ ಗೇರುಹಣ್ಣಿನಿಂದ ಸಾಂಪ್ರದಾಯಿಕವಾಗಿ ತಯಾರಿಸುವ “ಪೊಲ್ಲಿಟ್ಟು” ಎಂಬ ಉತ್ಪನ್ನವನ್ನು ಇನ್ನಷ್ಟು ಅಭಿವೃದ್ಧಿಪಡಿಸಿ ಮಾಡಿದ ಪ್ರಾಡಕ್ಟ್. ಇದರಲ್ಲಿ ಗೇರುಹಣ್ಣಿನ ರಸ ಮತ್ತು ತೆಂಗಿನತುರಿ ಮುಖ್ಯ ವಸ್ತುಗಳು” ಮಾಹಿತಿ ನೀಡಿದರು ಡಾ. ಮೆನೋನ್. ಮೊದಲು ಗೇರುಹಣ್ಣಿನ ಸ್ವಾದ ನಂತರ ತೆಂಗಿನತುರಿಯ ರುಚಿ. ಆಹ್ಲಾದಕರ ಅನುಭವ ಕೊಡುವ ಟಾಫಿ. ವೃತ್ತಿಪರ ಪ್ಯಾಕಿಂಗ್ ಮತ್ತು ಮಾಹಿತಿ. “ಈ ಉತ್ಪನ್ನ ಯಶಸ್ವಿಯಾಗುವುದರಲ್ಲಿ ಸಂದೇಹವಿಲ್ಲ” ನಮ್ಮೊಡನೆ ಇದ್ದ ಡಾ. ದೇಸಾಯಿಯವರ ಉದ್ಗಾರ.

ಕೇರಳದಲ್ಲಿ ಗೇರುಹಣ್ಣನ್ನು ಮನೆಬಳಕೆಗೆ ಅಲ್ಪ ಪ್ರಮಾಣದಲ್ಲಿ ಬಳಸುತ್ತಾರೆ. ಆದರೆ ವಾಣಿಜ್ಯಮಟ್ಟದ ಉತ್ಪನ್ನಗಳು ಮಾರುಕಟ್ಟೆಯಲ್ಲಿ ಇಲ್ಲವೇ ಇಲ್ಲ ಎಂಬ ಸ್ಥಿತಿ ಇತ್ತು. ಇದನ್ನು ಮನಗಂಡ ಕೇಂದ್ರ ವಿಭಿನ್ನ ಉತ್ಪನ್ನಗಳನ್ನು ತಯಾರಿಸಿದೆ. ಇವು ವಾಣಿಜ್ಯಮಟ್ಟದಲ್ಲಿ ಯಶಸ್ವಿಯಾಗುವ ಎಲ್ಲ ಸಾಧ್ಯತೆಗಳೂ ಇವೆ. “ಇಲ್ಲಿ 1999 ರಷ್ಟು ಮುಂಚೆಯೇ ಹಲವು ಉತ್ಪನ್ನಗಳನ್ನು ತಯಾರಿಸಿದ್ದರು. ಸದ್ಯಕ್ಕೆ ಏಳು ಉತ್ಪನ್ನಗಳು – ಗೇರುಹಣ್ಣಿನ ಸಿರಪ್, ಮಿಕ್ಸೆಡ್ ಫ್ರುಟ್ ಜಾಮ್, ಉಪ್ಪಿನಕಾಯಿ, ಸೋಡಾ, ಟಾಫಿ, ಎನರ್ಜಿ ಬಾರ್, ಕ್ಯಾಂಡಿ – ಇವನ್ನು ಕೇಂದ್ರದಲ್ಲಿರುವ ಸೇಲ್ ಕೌಂಟರಿನ ಮೂಲಕ ಮಾರಾಟಮಾಡುತ್ತಿದ್ದೇವೆ. ಸಾಕಷ್ಟು ಮಾರಾಟವಾಗುತ್ತಿದೆ. ಇದನ್ನು ಬಿಟ್ಟರೆ ಕೊಲ್ಲಂನಲ್ಲಿರುವ ಕೇರಳ ರಾಜ್ಯ ಗೇರು ಅಭಿವೃದ್ಧಿ ನಿಗಮದ ಮೂಲಕ, ಕೇರಳ ತೋಟದ ಬೆಳೆಗಳ ನಿಗಮದಡಿಯಲ್ಲಿ ಕಾಸರಗೋಡಿನಲ್ಲಿ ಮತ್ತು ಅರಳಮ್ ಫಾರ್ಮಿಂಗ್ ಕಾರ್ಪೋರೇಷನ್ ಅಡಿಯಲ್ಲಿ ಕಣ್ಣೂರಿನಲ್ಲಿ ಗೇರುಹಣ್ಣಿನ ಉತ್ಪನ್ನಗಳ ಮಾರಾಟ ಇದೆ. ಕೇರಳದ ಬೇರೆಡೆಯಲ್ಲಿ ಗೇರುಹಣ್ಣಿನ ಉತ್ಪನ್ನಗಳು ಅಷ್ಟಾಗಿ ಲಭ್ಯವಿಲ್ಲ” ಮೆನೋನ್ ಮಾಹಿತಿ. ಈ ಕೇಂದ್ರದಲ್ಲಿ ಚಿಕ್ಕದಾದರೂ ಗೇರುಹಣ್ಣಿನ ಮೌಲ್ಯವರ್ಧನೆಯ ಬಗ್ಗೆ ಗಣನೀಯ ಮಾಹಿತಿ ನೀಡುವ ಮ್ಯೂಸಿಯಂ ಇದೆ. ಈ ಸಂಶೋಧನಾ ಕೇಂದ್ರವು ಅಭಿವೃದ್ಧಿಪಡಿಸಿದ ಗೇರುಹಣ್ಣಿನ ಮೌಲ್ಯವರ್ಧನೆಯ ತಂತ್ರಜ್ಞಾನದ ಪ್ಯಾಕೇಜುಗಳು ಆಸಕ್ತ ವಾಣಿಜ್ಯೋದ್ಯಮಿಗಳಿಗೆ ಲಭ್ಯವಿದೆ. ಜೊತೆಗೆ ತರಬೇತಿಯೂ.

ಕರ್ನಾಟಕದಲ್ಲಿ ಮೊದಲು ಕರಾವಳಿಗೆ ಗೇರು ಕೃಷಿ ಸೀಮಿತವಾಗಿತ್ತು. ಮಲೆನಾಡಿನಲ್ಲಿ ಗೇರು ಇದ್ದರೂ ವ್ಯವಸ್ಥಿತ ಕೃಷಿ ಈಚೆಗೆ ಶುರುವಾಗಿದೆ. ಆದರೆ ಉತ್ತರ ಮತ್ತು ದಕ್ಷಿಣ ಕರ್ನಾಟಕದ ಬಯಲುಪ್ರದೇಶಗಳ ಕೆಂಪು ಮಣ್ಣಿನಲ್ಲಿ ಗೇರು ಜೋರಾಗಿಯೇ ಬೇರು ಬಿಡುತ್ತಿದೆ. ಗದಗ, ಬೀದರ್, ಬೆಳಗಾಂ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಕೋಲಾರ ಇತ್ಯಾದಿ ಜಿಲ್ಲೆಗಳಲ್ಲಿ ಗೇರು ಕೃಷಿ ಗಮನಾರ್ಹ ಪ್ರಮಾಣದಲ್ಲಿ ವಿಸ್ತಾರವಾಗುತ್ತಿದೆ. ಈ ಎಲ್ಲಾ ಭಾಗಗಳಲ್ಲಿ ಗೇರುಹಣ್ಣಿನ ಬಳಕೆ ಅತೀ ಕಡಿಮೆ. ಬಹುಪಾಲು ಬಿದ್ದು ಮಣ್ಣು ಸೇರುವ ಗೇರುಹಣ್ಣನ್ನು ಸದ್ಬಳಕೆ ಮಾಡುವ ಉಪಾಯಗಳು ಈಗಾಗಲೇ ಇವೆ. ಒಂದಿಷ್ಟು ಅಡಿಕಟ್ಟು ಸೌಕರ್ಯ ಹಾಗೂ ಕಲಿಕೆ ಇದ್ದರೆ ಗೇರುಹಣ್ಣಿನ ಉತ್ಪನ್ನಗಳು ಕರ್ನಾಟಕದಲ್ಲಿ ಸಿಗುವ ದಿನಗಳು ದೂರವಿಲ್ಲ. ಅದಕ್ಕೆ ಕೇರಳ ಕೃಷಿ ವಿವಿಯ ತಂತ್ರಜ್ಞಾನಗಳು ಸಾಕಷ್ಟು ಸಹಾಯ ಮಾಡಬಲ್ಲವು.

ಬರಹ :
ಡಾ. ಮೋಹನ್ ತಲಕಾಲುಕೊಪ್ಪ
,

ಹೆಚ್ಚಿನ ಮಾಹಿತಿಗೆ ಡಾ. ಜಲಜಾ ಮೆನೋನ್ : 94461 41724

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

4 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

5 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

11 hours ago

ಅಡಿಕೆ ಬೆಳೆ ನಷ್ಟಕ್ಕೆ ಎನ್‌ಡಿಆರ್‌ಎಫ್ ಪರಿಹಾರ ತೀರಾ ಕಡಿಮೆ…! ಪ್ರಕೃತಿ ವಿಕೋಪದಲ್ಲಿ ರೈತರಿಗೆ ಅನ್ಯಾಯ?

ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್‌ಡಿಆರ್‌ಎಫ್ ಪರಿಹಾರ ಮೊತ್ತ…

11 hours ago

ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಲ್ಲಿದೆ ಗೊತ್ತಾ..?

ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…

13 hours ago

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ; ರಾಸಾಯನಿಕ ಮಿಶ್ರಣವೇ ಅಪಾಯ – ಎಸ್.ಆರ್. ಸತೀಶ್ಚಂದ್ರ

ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…

14 hours ago