#RuralDevelopment | ತೆಂಗಿನ ಗೆರಟೆಯ ಮೌಲ್ಯವರ್ಧನೆ | ಮಹಿಳೆಯರಿಂದ ಆರ್ಥಿಕ ಸ್ವಾವಲಂಬನೆಯ ಹೆಜ್ಜೆ |

August 15, 2023
10:18 PM
ಸಂಜೀವಿನಿ ಒಕ್ಕೂಟದ ಮಹಿಳಾ ಸದಸ್ಯರು ತೆಂಗಿನ ಚಿಪ್ಪಿಯ ಮೌಲ್ಯವರ್ಧನೆಯ ಕಡೆಗೆ ಹೆಜ್ಜೆ ಇರಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಈ ಪ್ರಯತ್ನ ಯಶಸ್ವಿಯಾಗಿ ನಡೆದಿದೆ. ನಬಾರ್ಡ್ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ,  ಸಂಜೀವಿನಿ ಒಕ್ಕೂಟ ಹಾಗೂ ದ ಕ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆಯ ವತಿಯಿಂದ ತರಬೇತಿ ನೀಡಲಾಗಿದೆ.

ತೆಂಗಿನಕಾಯಿಯ ಮೌಲ್ಯವರ್ಧನೆಯ ಕಡೆಗೆ ಮಹಿಳೆಯರು ಮನಸ್ಸು ಮಾಡಿದ್ದಾರೆ. ಗ್ರಾಮೀಣ ಅಭಿವೃದ್ಧಿ ಹಾಗೂ ಗ್ರಾಮೀಣ ಆರ್ಥಿಕಕತೆಯನ್ನು ಹೆಚ್ಚಿಸುವ, ಬಲಪಡಿಸುವ ಉದ್ದೇಶದಿಂದ ಮಹತ್ವ ಯೋಜನೆಗಳು ಸಿದ್ಧವಾಗುತ್ತಿದೆ. ಈ  ಯೋಜನೆಯ ಮೂಲಕ ಸಂಜೀವಿನಿ ಒಕ್ಕೂಟದ ಮಹಿಳೆಯರು ಸ್ವಾವಲಂಬನೆಯ ಹಾದಿಯನ್ನು ಕಂಡುಕೊಳ್ಳುತ್ತಿದ್ದಾರೆ. ಇಲ್ಲಿ ತೆಂಗಿನ ಕಾಯಿಯ ಗೆರಟೆ ಉಪಯೋಗಿಸಿ ಹಲವು ವಸ್ತುಗಳನ್ನು ತಯಾರಿಸುವ ಮೂಲಕ ಗಮನ ಸೆಳೆದಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಶ್ರೀ ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಸದಸ್ಯರು ಈಗ ತೆಂಗಿನಕಾಯಿಯ ಚಿಪ್ಪಿಯ ಮೂಲಕ ಕಲಾಕೃತಿ ರಚನೆಯ ಮೂಲಕ ಸುದ್ದಿ ಮಾಡುತ್ತಿದ್ದಾರೆ. ತೆಂಗಿನ ಮೌಲ್ಯವರ್ಧನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಮಹಿಳಾ ಆರ್ಥಿಕ ಸ್ವಾವಲಂಬನೆಯ ಕಡೆಗೆ ಹೆಜ್ಜೆ ಇಡುತ್ತಿದ್ದಾರೆ. ಹೀಗೇ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ವಿವಿಧ ಬಗೆಯ ತರಬೇತಿ ನಡೆದಿದೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರ ಮೂಲಕ ಆರ್ಥಿಕ ಸ್ವಾವಲಂಬನೆಯ ಹಾದಿಯ ಕಡೆಗೆ ದಾರಿ ತೋರಿಸಲಾಗುತ್ತಿದೆ.

ನಬಾರ್ಡ್ ದಕ್ಷಿಣ ಕನ್ನಡ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ,  ಸಂಜೀವಿನಿ ಒಕ್ಕೂಟ ಹಾಗೂ ದ ಕ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆಯ ವತಿಯಿಂದ ತರಬೇತಿ ನೀಡಲಾಗಿದೆ. ತೆಂಗಿನ ಗೆರಟೆಯ ಮೂಲಕ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸುವ ಬಗ್ಗೆ ತರಬೇತಿ ನೀಡಲಾಗಿದೆ. ಪುತ್ತೂರಿನ ಕೋಡಿಂಬಾಡಿ, ವಿಟ್ಲದ ಪಡ್ನೂರು, ಮೂಡಬಿದರೆಯ ಅಳಿಯೂರು ತರಬೇತಿ ನೀಡಲಾಗಿದೆ. ಇದರ ಜೊತೆಗೆ ಪೊಳಲಿ ರಾಮಕೃಷ್ಣ ತಪೋವನದ ಆಶ್ರಯದಲ್ಲಿವಿಜಯಾ ಗ್ರಾಮೀಣ ಬ್ಯಾಂಕ್‌  ಸಹಯೋಗದೊಂದಿಗೆ ಕೂಡಾ ಪೊಳಲಿಯಲ್ಲಿ ತರಬೇತಿ ನೀಡಲಾಗಿದೆ. ವಿಶೇಷವಾಗಿ ತೆಂಗಿನ ಗೆರಟೆಯ ಮೌಲ್ಯವರ್ಧನೆಯ ಕಡೆಗೆ ಗಮನಹರಿಸಲಾಗಿತ್ತು. ತರಬೇತಿ ಪಡೆದ ಎಲ್ಲಾ ಸಂಘದ ಮಹಿಳಾ ಸದಸ್ಯರು ಕೆಲಸ ಆರಂಭಿಸುತ್ತಿದ್ದಾರೆ. ಅದರಲ್ಲೂ ಆರಂಭದಲ್ಲಿ ತರಬೇತಿ ಪಡೆದ ಕೋಡಿಂಬಾಡಿ ತಂಡವು ತನ್ನ ಕೆಲಸವನ್ನು ವಿಸ್ತರಿಸಿದೆ.

ಕೋಡಿಂಬಾಡಿಯ ಮಹಾಲಿಂಗೇಶ್ವರ ಸಂಜೀವಿನಿ ಒಕ್ಕೂಟದ ಮಹಿಳೆಯರು  ಫೆಬ್ರವರಿ ತಿಂಗಳಲ್ಲಿ ತರಬೇತಿ ಪಡೆದಿದ್ದು, ಒಟ್ಟು ಮೂರು ತಂಡಗಳಾಗಿ ವಿಂಗಡಿಸಲಾಗಿದೆ. ಮೂರೂ ತಂಡಗಳಿಗೆ ಪಾಲಿಶ್ ಮತ್ತು ಕಟಿಂಗ್ ಹೀಗೆ ಎಲ್ಲಾ ವಿಭಾಗದಲ್ಲೂ ಪರಿಣತಿ ಇದೆ.ಈಗ ಗಟ್ಟಿಮುಟ್ಟಾದ ಕೀಚೈನ್‌, ಅಡುಗೆ ಮನೆಗೆ ಬೇಕಾದ ಪಾತ್ರೆಗಳು, ಕಪ್‌, ಸ್ಮರಣಿಕೆ ಇತ್ಯಾದಿ ಮಾಡಿದ್ದಾರೆ. ಈ ಬಾರಿ ತ್ರಿವರ್ಣದ ಬ್ಯಾಡ್‌ ಕೂಡ ತಯಾರಿಸಿದ್ದಾರೆ. ಮಹಿಳಾ ತಂಡದ ಕೆಲಸಗಳು ಹೆಚ್ಚು ಗಮನ ಸೆಳೆದಿದೆ.

ಈ ತಂಡದಲ್ಲಿ 30 ಮಂದಿ ಮಹಿಳೆಯರು 3 ತಂಡಗಳಾಗಿ ಕೆಲಸ ಮಾಡುತ್ತಿದ್ದಾರೆ. ಜನನಿ, ಅಕ್ಷಯ ಹಾಗೂ ಜ್ಞಾನ ಸಂಜೀವಿನಿ ಘಟಕಗಳಾಗಿ ಕೆಲಸ ಆರಂಭಿಸಿದ್ದಾರೆ. ಕೆಲವರು ಮನೆಗಳಲ್ಲಿ ಹಾಗೂ ಕೋಡಿಂಬಾಡಿ ಗ್ರಾಪಂ ನೀಡಿರುವ ಕಟ್ಟದಲ್ಲಿ ಕೆಲಸ ಮಾಡುತ್ತಾರೆ. ಕಳೆದ 3 ತಿಂಗಳಿನಿಂದ ಕೆಲಸ ಮಾಡುತ್ತಿರುವ ಮಹಿಳೆಯರು ಪ್ಲಾಸ್ಟಿಕ್‌ ಬಳಸದೆಯೇ ಹಲವು ಉತ್ಪನ್ನಗಳನ್ನು ತಯಾರು ಮಾಡುವಷ್ಟು ಕುಶಲತೆಯನ್ನು ಈಗ ಪಡೆದಿದ್ದಾರೆ. ಸದ್ಯ ಸಂಜೀವಿನಿ ಒಕ್ಕೂಟವು ಸದಸ್ಯರು ತಯಾರಿಸಿರುವ ಉತ್ಪನ್ನಗಳ ಮಾರಾಟವನ್ನೂ ಮಾಡುತ್ತಿದ್ದಾರೆ.

This slideshow requires JavaScript.

ಸಂಜೀವಿನಿ ಒಕ್ಕೂಟದ ಸದಸ್ಯರು ಆಸಕ್ತಿಯಿಂದ ತೆಂಗಿನ ಗೆರಟೆಯ ಅಲಂಕಾರಿಕ ವಸ್ತುಗಳನ್ನು ತಯಾರು ಮಾಡುತ್ತಿದ್ದಾರೆ. ಇನ್ನಷ್ಟು ಯೋಚನೆ ಹಾಗೂ ಯೋಜನೆಗಳು ಸದಸ್ಯರಲ್ಲಿದೆ ಎಂದು ಹೇಳುತ್ತಾರೆ ಸಂಜೀವಿನಿ ಒಕ್ಕೂಟದ ಮುಖ್ಯಪುಸ್ತಕ ಬರಹಗಾರರಾದ ಸಂಧ್ಯಾ ರಾಮಚಂದ್ರ.

ಇವರಂತೆಯೇ ನಬಾರ್ಡ್ ದಕ್ಷಿಣ ಕನ್ನಡ ಮತ್ತು ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ,  ಸಂಜೀವಿನಿ ಒಕ್ಕೂಟ ಹಾಗೂ ದ ಕ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆಯ ವತಿಯಿಂದ ವಿಟ್ಲದಲ್ಲಿ , ಮೂಡಬಿದರೆಯಲ್ಲಿ ಕೂಡಾ ತರಬೇತಿ ನೀಡಲಾಗಿದೆ. ಇಲ್ಲೂ ಕೂಡಾ ಮಹಿಳಾ ತಂಡಗಳು ಕೆಲಸ ಆರಂಭಿಸಿದೆ.

ತಂಡಗಳಿಗೆ ತರಬೇತಿ ನೀಡಿರುವ ದ ಕ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆಯ ದಿನೇಶ್‌ ಅವರು ಹೇಳುವಂತೆ, ಮಹಿಳಾ ತಂಡಗಳು ತರಬೇತು ಪಡೆದ ಬಳಿಕ ಇದೀಗ ಕ್ರಿಯೇಟಿವ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಉತ್ತಮವಾದ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನುತ್ತಾರೆ. ಮುಂದೆ ತೆಂಗು ರೈತ ಉತ್ಪಾದಕ ಕಂಪನಿಯ ಮೂಲಕ ತೆಂಗಿನ ಗೆರಟೆಯ ಅಲಂಕಾರಿಕ ವಸ್ತುಗಳನ್ನು ಮಾರುಕಟ್ಟೆಗೂ ವ್ಯವಸ್ಥೆ ಮಾಡಲು ಎಂದು ಸಂಸ್ಥೆಯ ಅಧ್ಯಕ್ಷರು ಆಸಕ್ತಿ ವಹಿಸಿದ್ದಾರೆ ಎನ್ನುತ್ತಾರೆ.

ಮಣಿಪಾಲ ಭಾರತೀಯ ವಿಕಾಸ ಟ್ರಸ್ಟ್‌ನ  ಜೀವನ್‌ ಅವರು ಕಾರ್ಯಕ್ರಮ ವ್ಯವಸ್ಥಾಪಕರಾಗಿ ನಬಾರ್ಡ್‌ ಮೂಲಕ ನೆರವನ್ನು ಸಂಜೀವಿನಿ ಘಟಕ ಹಾಗೂ ಕಾರ್ಯಕ್ರಮ ಆಯೋಜನೆಗೆ ನೆರವು ನೀಡುತ್ತಿದ್ದಾರೆ. ಗ್ರಾಮೀಣ ಭಾಗದ ಆರ್ಥಿಕ ಸುಧಾರಣೆ ಹಾಗೂ ಸ್ವಾವಲಂಬನೆಯೇ ಮುಖ್ಯ ಉದ್ದೇಶವಾಗಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror