#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್

September 30, 2023
9:07 PM
ಗೋವಾ ಮತ್ತು ಮಂಗಳೂರು ನಡುವೆ ಸಂಚಾರ ಇನ್ನಷ್ಟು ಸುಲಭವಾಗುವ ನಿರೀಕ್ಷೆಯಿದೆ. ದೇಶದಲ್ಲಿ ವಂದೇ ಭಾರತ್ ರೈಲು ಕ್ರಾಂತಿಯನ್ನೇ ಮಾಡುತ್ತಿದೆ. ಕೊಂಚ ದುಬಾರಿಯಾದರೂ ಈ ಸೆಮಿ ಹೈಸ್ಪೀಡ್ ರೈಲು ಎಕ್ಸ್‌ಪ್ರೆಸ್ ಅನ್ನು ಪ್ರಯಾಣಿಕರು ತುಂಬಾ ಇಷ್ಟಪಡುತ್ತಿದ್ದಾರೆ.

ದಿನದಿಂದ ದಿನಕ್ಕೆ ವಂದೇ ಭಾರತ್‌ ರೈಲು ದೇಶದಾದ್ಯಂತ ತಮ್ಮ ಸಂಪರ್ಕವನ್ನು ವಿಸ್ತರಿಸುತ್ತಿದೆ. ಅದರಲ್ಲೂ ರಾಜ್ಯದಲ್ಲಿ ದಿನೇ ದಿನೇ ತನ್ನ ಸೇವೆಯನ್ನು ವಿಸ್ತರಿಸುತ್ತಿದೆ. ಇದೀಗ ಮಂಗಳೂರು ಮತ್ತು ಗೋವಾವನ್ನು ಸಂಪರ್ಕಿಸುವ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಅಕ್ಟೋಬರ್ ಅಂತ್ಯದ ವೇಳೆಗೆ ಪ್ರಾರಂಭಿಸಲು ರೈಲ್ವೇ ಇಲಾಖೆ  ನಿರ್ಧರಿಸಲಾಗಿದೆ.

ಕರಾವಳಿಯ ನಾಗರಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಕರಾವಳಿಯ ಎರಡು ಪ್ರಮುಖ ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭದ ಕುರಿತು ನಿರೀಕ್ಷೆ ಹೆಚ್ಚಿದೆ. ಮತ್ತೊಂದು ಗಮನಾರ್ಹ ಬೆಳವಣಿಗೆಯಲ್ಲಿ, ರೈಲ್ವೆ ಇಲಾಖೆಯು ಬೆಂಗಳೂರು-ಮೈಸೂರು-ಮಂಗಳೂರು-ಮುರ್ಡೇಶ್ವರ ರೈಲಿನ ವೇಳಾಪಟ್ಟಿಯನ್ನು ಪರಿಷ್ಕರಿಸುವ ಮೂಲಕ ಪ್ರಯಾಣಿಕರ ಮನವಿಗೆ ಸ್ಪಂದಿಸಿದೆ. ಇತ್ತೀಚಿಗಷ್ಟೇ ಬೆಂಗಳೂರು ಮತ್ತು ಹೈದರಾಬಾದ್ ನಡುವಿನ ಕಾಚಿಗುಡ-ಯಶವಂತಪುರ ರೈಲು ಸೇವೆಗೆ ಚಾಲನೆ ನೀಡಲಾಗಿದೆ. ಈ ಎರಡು ನಗರಗಳ ನಡುವೆ ಕಡಿಮೆ ಪ್ರಯಾಣದ ಸಮಯವನ್ನು ಹೊಂದಿರುವ ಅತ್ಯಂತ ವೇಗದ ರೈಲು ಇದಾಗಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಭಾರತದಲ್ಲಿ ಸಂಪರ್ಕ ಕ್ರಾಂತಿಯನ್ನೇ ತರುವ ನಿಟ್ಟಿನಲ್ಲಿ ಪ್ರಮುಖ ನಗರಗಳ ನಡುವೆ ಸೇವೆ ನೀಡುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್
July 31, 2026
10:20 AM
by: ದ ರೂರಲ್ ಮಿರರ್.ಕಾಂ
ಭಾರತದ ಕೃಷಿ ರಫ್ತು ಪಟ್ಟಿಯಲ್ಲಿ ಈಗ 500ಕ್ಕೂ ಹೆಚ್ಚು ಉತ್ಪನ್ನಗಳು..! ಭಾರತದ ಕೃಷಿ ಕ್ಷೇತ್ರಕ್ಕೆ ಇದು ದೊಡ್ಡ ಸುದ್ದಿ-ರೈತರಿಗೆ ಹೊಸ ಜಾಗತಿಕ ಅವಕಾಶ
July 31, 2026
10:02 AM
by: ದ ರೂರಲ್ ಮಿರರ್.ಕಾಂ
ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ
July 31, 2026
9:45 AM
by: ದ ರೂರಲ್ ಮಿರರ್.ಕಾಂ
ಕೊಡಗಿನಲ್ಲಿ ಚೇತರಿಕೆ ಕಂಡ ಮಳೆ- ಮೈಕೊರೆಯುವ ಚಳಿ, ಕಾವೇರಿ ನೀರಿನ ಮಟ್ಟ ಏರಿಕೆ
July 31, 2026
7:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror