Advertisement
MIRROR FOCUS

ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ – ಹೂ, ಹಣ್ಣುಗಳ   ಖರೀದಿ – ಭರದಿಂದ ಸಾಗಿರುವ ಸಿದ್ಧತೆ ಕಾರ್ಯಗಳು

Share

ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬ ನಾಳೆ ನಡೆಯಲಿದ್ದು, ರಾಜ್ಯಾದ್ಯಂತ ಹಬ್ಬದ ಸಿದ್ದತೆಗಳು ಭರದಿಂದ ನಡೆಯುತ್ತಿವೆ. ಮಾರುಕಟ್ಟೆಗಳಲ್ಲಿ ಜನರು ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ. ಹೂವು ಹಾಗೂ ಬಾಳೆ ಹಣ್ಣು, ತೆಂಗಿನ ಕಾಯಿಗಳ ಬೆಲೆ ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

Advertisement

ಚಿಕ್ಕಬಳ್ಳಾಪುರದ ಬಜಾರ್ ರಸ್ತೆ ಮತ್ತು ಶಿಡ್ಲಘಟ್ಟ ವೃತ್ತದಲ್ಲಿ ದುಬಾರಿ ಬೆಲೆಗಳ ನಡುವೆಯೂ ಹೂವು, ಹಣ್ಣು, ಬಾಳೆದಿಂಡು, ಮಾವಿನ ಎಲೆ ಮತ್ತು ಸಿಹಿತಿಂಡಿಗಳ ಖರೀದಿ ಭರಾಟೆಯಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಅತ್ಯಂತ ಉತ್ಸಾಹ ಮತ್ತು ಸಂಭ್ರಮ ಸಡಗರಗಳಿಂದ ತೊಡಗಿದ್ದ ದೃಶ್ಯಗಳು ಕಂಡುಬಂತು.

ವಾಣಿಜ್ಯ ನಗರಿ ದಾವಣಗೆರೆ ಜಿಲ್ಲಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಪೂಜೆಗಾಗಿ ಅಗತ್ಯ ಸಾಮಾಗ್ರಿಗಳನ್ನು ಮಹಿಳೆಯರು  ಖರೀದಿಸಿದರು. ಬೆಂಗಳೂರು ನಗರದ ಕೆ.ಆರ್.ಮಾರುಕಟ್ಟೆ, ಹೂವಿನ ಮಾರುಕಟ್ಟೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಹಣ್ಣು, ತರಕಾರಿ, ಪೂಜಾ ಸಾಮಾಗ್ರಿಗಳನ್ನು ಖರೀದಿಸಿದರು. ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ಪೂಜಾ ಸಾಮಾಗ್ರಿಗಳ ದರ ಹೆಚ್ಚಳವಾಗಿರುವುದು ಕಂಡು ಬಂತು.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ನಗರ ಮೈಸೂರಿನಲ್ಲಿಂದು ಖರೀದಿ ಭರಟೆ ಜೋರಾಗಿತ್ತು. ನಗರದ ಚಿಕ್ಕ ಗಡಿಯಾರ ವೃತ್ತ, ದೇವರಾಜ ಮಾರುಕಟ್ಟೆ, ಸಯ್ಯಾಜಿ ರಾವ್ ರಸ್ತೆ ಇತ್ಯಾದಿಯೆಡೆ ಗ್ರಾಹಕರು ಮುಗಿಬಿದ್ದು ಹೂವು, ಹಣ್ಣು, ಅಲಂಕಾರಿಕ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದರು. ಕೆಲವರು ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು ನೀಡುವ ಸಲುವಾಗಿ ಕಮಲದ ಹೂವಿನ ಜತೆಗೆ ತರಹೇವಾರಿ ಹೂಗಳನ್ನು ಖರೀದಿಸಿದರೆ ಮತ್ತೆ ಕೆಲವರು ಸಿಹಿ ಪದಾರ್ಥಗಳ ಖರೀದಿಯಲ್ಲಿ ತೊಡಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

2 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

6 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

7 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

7 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

16 hours ago

ಅಡಿಕೆ ವೈಜ್ಞಾನಿಕ ವಿಶ್ಲೇಷಣೆಯ ಪುಸ್ತಕ “ARECANUT” ಬಿಡುಗಡೆ

 ಮಂಗಳೂರು ಕ್ಯಾಂಪ್ಕೊ ಕೇಂದ್ರ ಕಚೇರಿಯಲ್ಲಿ ಅಡಿಕೆ ಕುರಿತಾದ ವೈಜ್ಞಾನಿಕ ಸಂಶೋಧನಾ ಪುಸ್ತಕ"ARECANUT" ಬಿಡುಗಡೆ…

16 hours ago