Advertisement
MIRROR FOCUS

ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ – ಹೂ, ಹಣ್ಣುಗಳ   ಖರೀದಿ – ಭರದಿಂದ ಸಾಗಿರುವ ಸಿದ್ಧತೆ ಕಾರ್ಯಗಳು

Share

ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬ ನಾಳೆ ನಡೆಯಲಿದ್ದು, ರಾಜ್ಯಾದ್ಯಂತ ಹಬ್ಬದ ಸಿದ್ದತೆಗಳು ಭರದಿಂದ ನಡೆಯುತ್ತಿವೆ. ಮಾರುಕಟ್ಟೆಗಳಲ್ಲಿ ಜನರು ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ. ಹೂವು ಹಾಗೂ ಬಾಳೆ ಹಣ್ಣು, ತೆಂಗಿನ ಕಾಯಿಗಳ ಬೆಲೆ ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

ಚಿಕ್ಕಬಳ್ಳಾಪುರದ ಬಜಾರ್ ರಸ್ತೆ ಮತ್ತು ಶಿಡ್ಲಘಟ್ಟ ವೃತ್ತದಲ್ಲಿ ದುಬಾರಿ ಬೆಲೆಗಳ ನಡುವೆಯೂ ಹೂವು, ಹಣ್ಣು, ಬಾಳೆದಿಂಡು, ಮಾವಿನ ಎಲೆ ಮತ್ತು ಸಿಹಿತಿಂಡಿಗಳ ಖರೀದಿ ಭರಾಟೆಯಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಅತ್ಯಂತ ಉತ್ಸಾಹ ಮತ್ತು ಸಂಭ್ರಮ ಸಡಗರಗಳಿಂದ ತೊಡಗಿದ್ದ ದೃಶ್ಯಗಳು ಕಂಡುಬಂತು.

ವಾಣಿಜ್ಯ ನಗರಿ ದಾವಣಗೆರೆ ಜಿಲ್ಲಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಪೂಜೆಗಾಗಿ ಅಗತ್ಯ ಸಾಮಾಗ್ರಿಗಳನ್ನು ಮಹಿಳೆಯರು  ಖರೀದಿಸಿದರು. ಬೆಂಗಳೂರು ನಗರದ ಕೆ.ಆರ್.ಮಾರುಕಟ್ಟೆ, ಹೂವಿನ ಮಾರುಕಟ್ಟೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಹಣ್ಣು, ತರಕಾರಿ, ಪೂಜಾ ಸಾಮಾಗ್ರಿಗಳನ್ನು ಖರೀದಿಸಿದರು. ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ಪೂಜಾ ಸಾಮಾಗ್ರಿಗಳ ದರ ಹೆಚ್ಚಳವಾಗಿರುವುದು ಕಂಡು ಬಂತು.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ನಗರ ಮೈಸೂರಿನಲ್ಲಿಂದು ಖರೀದಿ ಭರಟೆ ಜೋರಾಗಿತ್ತು. ನಗರದ ಚಿಕ್ಕ ಗಡಿಯಾರ ವೃತ್ತ, ದೇವರಾಜ ಮಾರುಕಟ್ಟೆ, ಸಯ್ಯಾಜಿ ರಾವ್ ರಸ್ತೆ ಇತ್ಯಾದಿಯೆಡೆ ಗ್ರಾಹಕರು ಮುಗಿಬಿದ್ದು ಹೂವು, ಹಣ್ಣು, ಅಲಂಕಾರಿಕ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದರು. ಕೆಲವರು ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು ನೀಡುವ ಸಲುವಾಗಿ ಕಮಲದ ಹೂವಿನ ಜತೆಗೆ ತರಹೇವಾರಿ ಹೂಗಳನ್ನು ಖರೀದಿಸಿದರೆ ಮತ್ತೆ ಕೆಲವರು ಸಿಹಿ ಪದಾರ್ಥಗಳ ಖರೀದಿಯಲ್ಲಿ ತೊಡಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

5 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

14 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

18 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago