ದೇಶದ ಪ್ರಮುಖ ಆಹಾರ ಬೆಳೆಯಾದ ಭತ್ತದ 11290 ವೈವಿಧ್ಯಮಯ ತಳಿಗಳನ್ನು ಒಂದೇ ಜಾಗದಲ್ಲಿ ಬಿತ್ತನೆ ಮಾಡಿ, ಏಕಕಾಲದಲ್ಲಿ ಬೆಳೆಸುವ ಮೂಲಕ ಮಹತ್ವದ ಸಂಶೋಧನೆಗೆ ಮಂಡ್ಯ ತಾಲ್ಲೂಕಿನ ವಿ.ಸಿ.ಫಾರಂನಲ್ಲಿರುವ ಬೆಂಗಳೂರು ಕೃಷಿ ವಿವಿಯ ವಲಯ ಕೃಷಿ ಸಂಶೋಧನಾ ಕೇಂದ್ರ ಮುಂದಾಗಿದೆ.
ಕೇಂದ್ರ ಸರ್ಕಾರದ ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶನದ ಮೇರೆಗೆ ನಡೆಯುತ್ತಿರುವ ಈ ಸಂಶೋಧನಾ ಕಾರ್ಯಕ್ಕೆ ವಿ.ಸಿ.ಫಾರಂ ಸೇರಿದಂತೆ ರಾಜ್ಯಮಟ್ಟದ 14 ಕೃಷಿ ಸಂಶೋಧನಾ ಸಂಸ್ಥೆಗಳು ಮತ್ತು ರಾಜ್ಯದ ಕೃಷಿ ವಿಶ್ವವಿದ್ಯಾನಿಲಯಗಳು ಕೈಜೋಡಿಸಿದ್ದು, ಐದು ವರ್ಷಗಳ ಸಂಶೋಧನೆಗೆ ಒಟ್ಟು 50 ಕೋಟಿ ಮೀಸಲಿಡಲಾಗಿದೆ. ಅಧಿಕ ಇಳುವರಿ ಮತ್ತು ರೋಗ ಇರೋಧಕ ಗುಣಗಳಿರುವ ಸುಧಾರಿತ ತಳಿಗಳನ್ನು ಅಭಿವೃದ್ಧಿ ಪಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸದ್ಯ ವಿ.ಸಿ.ಫಾರಂನಲ್ಲಿ ವೈವಿಧ್ಯಮಯ ತಳಿಗಳನ್ನು ಕಾಣಬಹುದಾಗಿದೆ.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…