ವಿಶ್ವಪ್ರಸಿದ್ಧ ಮೈಸೂರಿನ ಜಯ ಚಾಮರಾಜೇಂದ್ರ ಮೃಗಾಲಯಕ್ಕೆ ನೂತನ ಪ್ರಾಣಿಗಳ ಆಗಮನವಾಗಿದೆ. ಪ್ರಾಣಿ ವಿನಿಮಿಯ ಯೋಜನೆ ಅಡಿಯಲ್ಲಿ ಗೊರಿಲ್ಲಾ, ಕಪ್ಪುಚ್ಚಿನ್ ಮಂಕಿ, ಜಾಗ್ವಾರ್ ಚೀತಾಗಳ ಆಗಮನದಿಂದಾಗಿ ಮೈಸೂರು ಮೃಗಾಲಯದ ಮೆರಗು ಹೆಚ್ಚಾಗಿದೆ. ಈ ಬಗ್ಗೆ ಮೃಗಾಲಯ ಪ್ರಾಧಿಕಾರದ ಕಾರ್ಯನಿರ್ವಣಾಧಿಕಾರಿ ಅನುಷಾ ಪಿ ಮಾಹಿತಿ ನೀಡಿ , ದಸರಾ ಮಹೋತ್ಸವದ ವೇಳೆಯಲ್ಲಿ ದೇಶವಿದೇಶದಿಂದ ಪ್ರವಾಸಿಗರು ಮೈಸೂರು ಮೃಗಾಲಯಕ್ಕೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿದೇಶಿ ಪ್ರಾಣಿಗಳನ್ನ ವೀಕ್ಷಿಸಲು ಪ್ರವಾಸಿಗರಿಗೆ ಅನುವು ಮಾಡಿಕೊಡಲಾಗಿದೆ. ನೂತನ ಪ್ರಾಣಿಗಳು ಇಲ್ಲಿನ ವಾತಾವರಣಕ್ಕೆ ಹೊಂದಿಕೊಂಡಿದ್ದು ಈ ಪ್ರಾಣಿಗಳ ಸಂತತಿಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

