ವರ್ಲಿಚಾಲ್ ಬೆಂಕಿ ಅಪಘದಲ್ಲಿ ಬದುಕುಳಿದ ಐದು ವರ್ಷದ ಮಗುವಿನ ಶಿಕ್ಷಣದ ವೆಚ್ಚವನ್ನು ಶಿವಸೇನೆ ವಹಿಸಿಕೊಳ್ಳಲಿದೆ ಎಂದು ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಮಂಗಳವಾರ ಹೇಳಿದ್ದಾರೆ.
ನವೆಂಬರ್ 30 ರಂದು ಮುಂಬೈನ ವರ್ಲಿ ಪ್ರದೇಶದಲ್ಲಿನ ಚಾಲ್ನಲ್ಲಿ ಗ್ಯಾಸ್ ಸಿಲಿಂಡರ್ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ಮೂವರು ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಎರಡು ತಿಂಗಳಿಗೂ ಹೆಚ್ಚು ಸಮಯದ ನಂತರ ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಆ ಮಗುವನ್ನು ಇಂದು ನಾವು ದತ್ತು ತೆಗೆದುಕೊಂಡಿದ್ದೇವೆ. ಮಾತ್ರವಲ್ಲ, ಆ ಮಗುವಿನ ಹೆಸರಿನಲ್ಲಿ 15 ಲಕ್ಷ ರೂಪಾಯಿಗಳನ್ನು ಠೇವಣಿ ಇರಿಸಿದ್ದೇವೆ, ನಾವು ಪ್ರತಿ ತಿಂಗಳು 5,000-10,000 ರೂ.ಗಳನ್ನು ಅವರ ಖಾತೆಗೆ ಕಳುಹಿಸುತ್ತೇವೆ ಎಂದು ಮೇಯರ್ ಕಿಶೋರಿ ಹೇಳಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel