Advertisement
ಸುದ್ದಿಗಳು

#Drougt | ಕಾವೇರಿ ಮೇಲೆ ಕೃಪೆ ತೋರದ ವರುಣನ | ಬೇಗ ಮಳೆ ಬಾರದಿದ್ದರೆ ಅನ್ನದಾತರ ಪರಿಸ್ಥಿತಿ ಸಂಕಷ್ಟ |

Share

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂಗಾರು ತಕ್ಕ ಮಟ್ಟಿಗೆ ಕೃಪೆ ತೋರಿದ್ದರು, ಕಾವೇರಿ #Couvery ಜಲಾನಯನ ಪ್ರದೇಶದಲ್ಲಿ ಇನ್ನು ಮಳೆರಾಯ ಮುನಿಸಿಕೊಂಡಿದ್ದಾನೆ. ಎಂದಿನಂತೆ ಮುಂಗಾರು ಮಳೆ ಸುರಿಯುತ್ತಿದ್ದರೆ, ಮೈಸೂರು ಕೆಆರ್ ಎಸ್ ಡ್ಯಾಂ #KRSDam ತುಂಬಬೇಕಿತ್ತು. ಆದರೆ ಈಗ ನೀರು ಖಾಲಿಯಾಗಿ ಕಾವೇರಿ ಮಾತೆ ಒಣಗಿ ಹೋಗಿದ್ದಾಳೆ.ರೈತರು ಸಂಕಷ್ಟದಲ್ಲಿದ್ದಾರೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ.

ಕಾವೇರಿ ಜಲಾಯನ ಪ್ರದೇಶದ  ಮೇಲೆ ವರುಣ ಮುನಿಸಿಕೊಂಡಂತಿದೆ. ಮುಂಗಾರು ಮಳೆ ಕೈ ಕೊಟ್ಟಿದ್ದು ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದ್ರೆ ಇತ್ತ ನಾಲೆಗಳಲ್ಲಿ ನೀರಿಲ್ಲದೆ ರೈತರು ಬೆಳೆದ ಬೆಳೆಗೆ ನೀರು ಹರಿಸಲಾಗದೆ ಕಂಗಾಲಾಗಿದ್ದಾರೆ. ಸಕ್ಕರೆ ನಗರಿ ರೈತರ ಬವಣೆ ಯಾವ ರೀತಿಯಾಗಿದೆ ಅನ್ನುವುದರ ಒಂದು ರಿಪೋರ್ಟ್ ನಿಮ್ಮ ಮುಂದೆ. …. ಕಣ್ಣಾಡಿಸಿದ ಕಡೆಯಲ್ಲ ಬೆಳೆದು ನಿಂತ ಕಬ್ಬು.. ಮತ್ತೊಂದೆಡೆ ನೀರಿಲ್ಲದ ಬತ್ತಿರುವ ನಾಲೆಗಳು.. ಇತ್ತ ನೀರಿಲ್ಲದೆ ಒಣಗುತ್ತಿರುವ ಬೆಳೆದು ನಿಂತ ಕಬ್ಬಿನ ಬೆಳೆ.. ಏನು ಮಾಡಬೇಕೆಂದು ಕಂಗೆಟ್ಟಿರುವ ರೈತ. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಕಿರುಗಾವಲಿನಲ್ಲಿ. ಹೌದು ಮುಂಗಾರು ಮಳೆ ಕೈ ಕೊಟ್ಟ ಬೆನ್ನಲ್ಲೆ ಸಕ್ಕರೆ ನಗರಿ ಮಂಡ್ಯದಲ್ಲಿ ಬರದ ಛಾಯೆ ಮೂಡಿದೆ. ಇತ್ತ ಬಿತ್ತಲು ಆಗದೆ ಅತ್ತ ಬೆಳೆದು ನಿಂತ ಬೆಳೆಗಳಿಗು ನೀರು ಹರಿಸಲಾಗದೆ ಅನ್ನದಾತ ಪರದಾಡುತ್ತಿದ್ದಾನೆ. ಜುಲೈ 5 ರೊಳಗೆ ಮಳೆ ಬಾರದೆ ಹೋದರೆ ಅನ್ನದಾತ ಶೋಚನೀಯ ಪರಿಸ್ಥಿತಿಗೆ ಬಂದು ತಲುಪಲಿದ್ದಾನೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಆಗ್ತಾಯಿಲ್ಲ ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದೆ. 124 80 ಅಡಿ ಸಾಮಾರ್ಥ್ಯವುಳ್ಳ ಕೃಷ್ಣರಾಜಸಾಗರದ ಇಂದಿನ ನೀರಿನ ಮಟ್ಟ ಕೇವಲ 77 ಅಡಿಗೆ ಕುಸಿದಿದೆ. ಇನ್ನು 7 ಅಡಿ ನೀರು ತಗ್ಗಿದರೆ ಉಳಿದ 70 ಅಡಿ ನೀರನ್ನ ಡೆಡ್ ಸ್ಟೋರೆಜ್ ಎಂದು ಘೋಷಿಸಲಾಗುತ್ತೆ. ರಾಜಧಾನಿ ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜನರಿಗೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಲಿದೆ. ಜುಲೈ 5 ರ ಒಳಗೆ ನಿಗದಿತ ಪ್ರಮಾಣದ ಮಳೆ ಆಗದೆ ಹೋದರೆ ಕುಡಿಯುವ ನೀರಿಗು ಸಮಸ್ಯೆ ಎದುರಾಗಲಿದೆ.

ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಇತ್ತ ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ. ಮಳೆಗಾಗಿ ರೈತರು ದೇವರ ಮೊರೆ ಹೋಗುವಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 hour ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

5 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

17 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

18 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

18 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

19 hours ago