Advertisement
ಸುದ್ದಿಗಳು

#Drougt | ಕಾವೇರಿ ಮೇಲೆ ಕೃಪೆ ತೋರದ ವರುಣನ | ಬೇಗ ಮಳೆ ಬಾರದಿದ್ದರೆ ಅನ್ನದಾತರ ಪರಿಸ್ಥಿತಿ ಸಂಕಷ್ಟ |

Share

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂಗಾರು ತಕ್ಕ ಮಟ್ಟಿಗೆ ಕೃಪೆ ತೋರಿದ್ದರು, ಕಾವೇರಿ #Couvery ಜಲಾನಯನ ಪ್ರದೇಶದಲ್ಲಿ ಇನ್ನು ಮಳೆರಾಯ ಮುನಿಸಿಕೊಂಡಿದ್ದಾನೆ. ಎಂದಿನಂತೆ ಮುಂಗಾರು ಮಳೆ ಸುರಿಯುತ್ತಿದ್ದರೆ, ಮೈಸೂರು ಕೆಆರ್ ಎಸ್ ಡ್ಯಾಂ #KRSDam ತುಂಬಬೇಕಿತ್ತು. ಆದರೆ ಈಗ ನೀರು ಖಾಲಿಯಾಗಿ ಕಾವೇರಿ ಮಾತೆ ಒಣಗಿ ಹೋಗಿದ್ದಾಳೆ.ರೈತರು ಸಂಕಷ್ಟದಲ್ಲಿದ್ದಾರೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ.

Advertisement

ಕಾವೇರಿ ಜಲಾಯನ ಪ್ರದೇಶದ  ಮೇಲೆ ವರುಣ ಮುನಿಸಿಕೊಂಡಂತಿದೆ. ಮುಂಗಾರು ಮಳೆ ಕೈ ಕೊಟ್ಟಿದ್ದು ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದ್ರೆ ಇತ್ತ ನಾಲೆಗಳಲ್ಲಿ ನೀರಿಲ್ಲದೆ ರೈತರು ಬೆಳೆದ ಬೆಳೆಗೆ ನೀರು ಹರಿಸಲಾಗದೆ ಕಂಗಾಲಾಗಿದ್ದಾರೆ. ಸಕ್ಕರೆ ನಗರಿ ರೈತರ ಬವಣೆ ಯಾವ ರೀತಿಯಾಗಿದೆ ಅನ್ನುವುದರ ಒಂದು ರಿಪೋರ್ಟ್ ನಿಮ್ಮ ಮುಂದೆ. …. ಕಣ್ಣಾಡಿಸಿದ ಕಡೆಯಲ್ಲ ಬೆಳೆದು ನಿಂತ ಕಬ್ಬು.. ಮತ್ತೊಂದೆಡೆ ನೀರಿಲ್ಲದ ಬತ್ತಿರುವ ನಾಲೆಗಳು.. ಇತ್ತ ನೀರಿಲ್ಲದೆ ಒಣಗುತ್ತಿರುವ ಬೆಳೆದು ನಿಂತ ಕಬ್ಬಿನ ಬೆಳೆ.. ಏನು ಮಾಡಬೇಕೆಂದು ಕಂಗೆಟ್ಟಿರುವ ರೈತ. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಕಿರುಗಾವಲಿನಲ್ಲಿ. ಹೌದು ಮುಂಗಾರು ಮಳೆ ಕೈ ಕೊಟ್ಟ ಬೆನ್ನಲ್ಲೆ ಸಕ್ಕರೆ ನಗರಿ ಮಂಡ್ಯದಲ್ಲಿ ಬರದ ಛಾಯೆ ಮೂಡಿದೆ. ಇತ್ತ ಬಿತ್ತಲು ಆಗದೆ ಅತ್ತ ಬೆಳೆದು ನಿಂತ ಬೆಳೆಗಳಿಗು ನೀರು ಹರಿಸಲಾಗದೆ ಅನ್ನದಾತ ಪರದಾಡುತ್ತಿದ್ದಾನೆ. ಜುಲೈ 5 ರೊಳಗೆ ಮಳೆ ಬಾರದೆ ಹೋದರೆ ಅನ್ನದಾತ ಶೋಚನೀಯ ಪರಿಸ್ಥಿತಿಗೆ ಬಂದು ತಲುಪಲಿದ್ದಾನೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಆಗ್ತಾಯಿಲ್ಲ ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದೆ. 124 80 ಅಡಿ ಸಾಮಾರ್ಥ್ಯವುಳ್ಳ ಕೃಷ್ಣರಾಜಸಾಗರದ ಇಂದಿನ ನೀರಿನ ಮಟ್ಟ ಕೇವಲ 77 ಅಡಿಗೆ ಕುಸಿದಿದೆ. ಇನ್ನು 7 ಅಡಿ ನೀರು ತಗ್ಗಿದರೆ ಉಳಿದ 70 ಅಡಿ ನೀರನ್ನ ಡೆಡ್ ಸ್ಟೋರೆಜ್ ಎಂದು ಘೋಷಿಸಲಾಗುತ್ತೆ. ರಾಜಧಾನಿ ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜನರಿಗೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಲಿದೆ. ಜುಲೈ 5 ರ ಒಳಗೆ ನಿಗದಿತ ಪ್ರಮಾಣದ ಮಳೆ ಆಗದೆ ಹೋದರೆ ಕುಡಿಯುವ ನೀರಿಗು ಸಮಸ್ಯೆ ಎದುರಾಗಲಿದೆ.

Advertisement

ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಇತ್ತ ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ. ಮಳೆಗಾಗಿ ರೈತರು ದೇವರ ಮೊರೆ ಹೋಗುವಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago