Advertisement
ಸುದ್ದಿಗಳು

#Drougt | ಕಾವೇರಿ ಮೇಲೆ ಕೃಪೆ ತೋರದ ವರುಣನ | ಬೇಗ ಮಳೆ ಬಾರದಿದ್ದರೆ ಅನ್ನದಾತರ ಪರಿಸ್ಥಿತಿ ಸಂಕಷ್ಟ |

Share

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂಗಾರು ತಕ್ಕ ಮಟ್ಟಿಗೆ ಕೃಪೆ ತೋರಿದ್ದರು, ಕಾವೇರಿ #Couvery ಜಲಾನಯನ ಪ್ರದೇಶದಲ್ಲಿ ಇನ್ನು ಮಳೆರಾಯ ಮುನಿಸಿಕೊಂಡಿದ್ದಾನೆ. ಎಂದಿನಂತೆ ಮುಂಗಾರು ಮಳೆ ಸುರಿಯುತ್ತಿದ್ದರೆ, ಮೈಸೂರು ಕೆಆರ್ ಎಸ್ ಡ್ಯಾಂ #KRSDam ತುಂಬಬೇಕಿತ್ತು. ಆದರೆ ಈಗ ನೀರು ಖಾಲಿಯಾಗಿ ಕಾವೇರಿ ಮಾತೆ ಒಣಗಿ ಹೋಗಿದ್ದಾಳೆ.ರೈತರು ಸಂಕಷ್ಟದಲ್ಲಿದ್ದಾರೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ.

ಕಾವೇರಿ ಜಲಾಯನ ಪ್ರದೇಶದ  ಮೇಲೆ ವರುಣ ಮುನಿಸಿಕೊಂಡಂತಿದೆ. ಮುಂಗಾರು ಮಳೆ ಕೈ ಕೊಟ್ಟಿದ್ದು ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದ್ರೆ ಇತ್ತ ನಾಲೆಗಳಲ್ಲಿ ನೀರಿಲ್ಲದೆ ರೈತರು ಬೆಳೆದ ಬೆಳೆಗೆ ನೀರು ಹರಿಸಲಾಗದೆ ಕಂಗಾಲಾಗಿದ್ದಾರೆ. ಸಕ್ಕರೆ ನಗರಿ ರೈತರ ಬವಣೆ ಯಾವ ರೀತಿಯಾಗಿದೆ ಅನ್ನುವುದರ ಒಂದು ರಿಪೋರ್ಟ್ ನಿಮ್ಮ ಮುಂದೆ. …. ಕಣ್ಣಾಡಿಸಿದ ಕಡೆಯಲ್ಲ ಬೆಳೆದು ನಿಂತ ಕಬ್ಬು.. ಮತ್ತೊಂದೆಡೆ ನೀರಿಲ್ಲದ ಬತ್ತಿರುವ ನಾಲೆಗಳು.. ಇತ್ತ ನೀರಿಲ್ಲದೆ ಒಣಗುತ್ತಿರುವ ಬೆಳೆದು ನಿಂತ ಕಬ್ಬಿನ ಬೆಳೆ.. ಏನು ಮಾಡಬೇಕೆಂದು ಕಂಗೆಟ್ಟಿರುವ ರೈತ. ಈ ಎಲ್ಲಾ ದೃಶ್ಯ ಕಣ್ಣಿಗೆ ರಾಚಿದ್ದು ಮಂಡ್ಯ ಜಿಲ್ಲೆ ಮಂಡ್ಯ ತಾಲೂಕಿನ ಕಿರುಗಾವಲಿನಲ್ಲಿ. ಹೌದು ಮುಂಗಾರು ಮಳೆ ಕೈ ಕೊಟ್ಟ ಬೆನ್ನಲ್ಲೆ ಸಕ್ಕರೆ ನಗರಿ ಮಂಡ್ಯದಲ್ಲಿ ಬರದ ಛಾಯೆ ಮೂಡಿದೆ. ಇತ್ತ ಬಿತ್ತಲು ಆಗದೆ ಅತ್ತ ಬೆಳೆದು ನಿಂತ ಬೆಳೆಗಳಿಗು ನೀರು ಹರಿಸಲಾಗದೆ ಅನ್ನದಾತ ಪರದಾಡುತ್ತಿದ್ದಾನೆ. ಜುಲೈ 5 ರೊಳಗೆ ಮಳೆ ಬಾರದೆ ಹೋದರೆ ಅನ್ನದಾತ ಶೋಚನೀಯ ಪರಿಸ್ಥಿತಿಗೆ ಬಂದು ತಲುಪಲಿದ್ದಾನೆ.

ಕಾವೇರಿ ಜಲಾಯನ ಪ್ರದೇಶದಲ್ಲಿ ಮಳೆ ಆಗ್ತಾಯಿಲ್ಲ ಕನ್ನಂಬಾಡಿ ಕಟ್ಟೆಯ ಒಡಲು ಬರಿದಾಗುತ್ತಿದೆ. 124 80 ಅಡಿ ಸಾಮಾರ್ಥ್ಯವುಳ್ಳ ಕೃಷ್ಣರಾಜಸಾಗರದ ಇಂದಿನ ನೀರಿನ ಮಟ್ಟ ಕೇವಲ 77 ಅಡಿಗೆ ಕುಸಿದಿದೆ. ಇನ್ನು 7 ಅಡಿ ನೀರು ತಗ್ಗಿದರೆ ಉಳಿದ 70 ಅಡಿ ನೀರನ್ನ ಡೆಡ್ ಸ್ಟೋರೆಜ್ ಎಂದು ಘೋಷಿಸಲಾಗುತ್ತೆ. ರಾಜಧಾನಿ ಬೆಂಗಳೂರು, ಮಂಡ್ಯ ಹಾಗೂ ಮೈಸೂರು ಜನರಿಗೆ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಠಿಯಾಗಲಿದೆ. ಜುಲೈ 5 ರ ಒಳಗೆ ನಿಗದಿತ ಪ್ರಮಾಣದ ಮಳೆ ಆಗದೆ ಹೋದರೆ ಕುಡಿಯುವ ನೀರಿಗು ಸಮಸ್ಯೆ ಎದುರಾಗಲಿದೆ.

ಮಳೆಗಾಗಿ ಅನ್ನದಾತರು ಕಾದು ಕುಳಿತಿದ್ದಾರೆ. ಇತ್ತ ಬೆಳೆದ ಬೆಳೆಗೆ ನೀರು ಹರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಜಲ ಕ್ಷಾಮದಿಂದ ಮುಂಬರುವ ದಿನಗಳಲ್ಲಿ ಕುಡಿಯುವ ಹನಿ ನೀರಿಗೂ ಜನ ಪರಿತಪಿಸುವಂತಹ ಪರಿಸ್ಥಿತಿ ಎದುರಾಗುವ ಲಕ್ಷಣಗಳಿವೆ. ಮಳೆಗಾಗಿ ರೈತರು ದೇವರ ಮೊರೆ ಹೋಗುವಂತಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

5 minutes ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

14 minutes ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

29 minutes ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

11 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

11 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

11 hours ago