Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಿಂದ ವಿದ್ಯಾರ್ಥಿಗಳಿಗಾಗಿ ಆನ್‍ಲೈನ್ ಸ್ಫರ್ಧೆಗಳ ಆಯೋಜನೆ

Share

ಪಾಠಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ವಿದ್ಯಾರ್ಥಿಗಳ ಮನಸ್ಸು ಪ್ರಪುಲ್ಲಗೊಳ್ಳತ್ತದೆ. ಆನ್‍ಲೈನ್ ಸ್ಫರ್ಧೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಯನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಷ್ಣು ಗಣಪತಿಭಟ್ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ 2020-21 ನೇ ಸಾಲಿನ ಆನ್‍ಲೈನ್ ಸ್ಫರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು. ಕೊರೊನಾದಿಂದಾಗಿ ಮನೆಯ ನಾಲ್ಕು ಗೋಡೆಗಳ ಮಧ್ಯೆ ಬಂಧಿಯಾಗಿದ್ದ ವಿದ್ಯಾರ್ಥಿಗಳ ಮನಸ್ಸಿಗೆ ಚೈತನ್ಯ ನೀಡುವ ಉದ್ದೇಶದಿಂದ ಈ ಆನ್‍ಲೈನ್ ಚಟುವಟಿಕೆಗಳು ಪ್ರೇರಣೆಯಾಗಬಲ್ಲುದು. ಇಲ್ಲಿ ಸ್ಪರ್ಧೆಯಿದ್ದರೂ ಅದಕ್ಕಿಂತ ಹೆಚ್ಚಾಗಿ ವಿದ್ಯಾರ್ಥಿಗಳು ಬಹುಮಾನವನ್ನು ಲೆಕ್ಕಿಸದೆ ಉತ್ಸುಕತೆಯಿಂದ ಪಾಲ್ಗೊಳಬೇಕು ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಮುಖ್ಯ ಅತಿಥಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಸುಶೋಭಿತ ಮಾತನಾಡಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿವೇಕಾನಂದ ಪದವಿಪೂರ್ವ ಕಾಲೇಜು ಸಮಾನಾಗಿ ಮಹತ್ವವನ್ನು ನೀಡುತ್ತಿದೆ. ಪಾಠದ ಜೊತೆಗೆ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಇಂತಹ ವಿವಿಧ ರೀತಿಯ ಆನ್‍ಲೈನ್ ಸ್ಫರ್ಧೆಗಳು ಸಹಕಾರಿ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ಸ್ಫರ್ಧೆ ಜಗತ್ತಿಗೆ ಅಗತ್ಯ. ಇಂತಹ ಸ್ಫರ್ಧೆಯ ಮೂಲಕ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಆನಂದ ಮತ್ತು ಚೈತನ್ಯವನ್ನು ಜೀವಂತವಾಗಿರಿಸಲು ಸಾಧ್ಯವಾಗುವುದು. ಒದಗಿ ಬರುವ ಅವಕಾಶಗಳನ್ನು ಎಂದೂ ಕೈಬಿಡಬಾರದು. ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮತ್ತುಆತ್ಮವಿಶ್ವಾಸ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು.

ವರ್ಣಚಿತ್ರ ರಚನೆ, ಶಾಸ್ತ್ರೀಯ ಸಂಗೀತ ಗಾಯನ, ಕನ್ನಡ ಕಗ್ಗ ವಾಚನ-ವಿವರಣೆ ಸ್ಫರ್ಧೆ, ಭಜನಾ ಸ್ಫರ್ಧೆ, ಸುಂದರ ಹಾರ ತಯಾರಿ ಸ್ಫರ್ಧೆ, ವರ್ತಮಾನ ಪತ್ರಿಕಾರಚನಾ ಸ್ಫರ್ಧೆ, ಭಗವದ್ಗೀತಾ ಕಂಠಪಾಠ, ಗೂಡುದೀಪರಚನಾ ಸ್ಫರ್ಧೆ, ಯಕ್ಷಗಾನದಲ್ಲಿ ಹೊಸತನ, ಇಂಗ್ಲೀಷ್ ಕವನ, ಹಿಂದಿ ಭಾಷಣ ಸ್ಫರ್ಧೆ, ಏಕಪಾತ್ರಭಿನಯ, ಕಸದಿಂದ ರಸ, ಛದ್ಮವೇಷ ಸ್ಫರ್ಧೆ, ಕಿರುಚಿತ್ರ ಸ್ಫರ್ಧೆ ಹೀಗೆ ಒಟ್ಟು 15 ವಿವಿಧ ರೀತಿಯ ಸ್ಫರ್ಧೆಗಳನ್ನು ವಿದ್ಯಾರ್ಥಿಗಳಿಗಾಗಿ ನಿಯೋಜಿಸಲಾಗಿದೆ. ಈ ಸ್ಫರ್ಧೆಯು ಅಕ್ಟೋಬರ್ 19 ರಿಂದ ಡಿಸೆಂಬರ್ 10 ರವರೆಗೆ ಕೋವಿಡ್ ನಿಯಮಗಳನ್ನು ಅನುಸರಿಸಿಕೊಂಡು ನಡೆಯಲಿದೆ. ಕೊರೋನಾದ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳನ್ನು ಇಂತಹ ಪೂರಕ ಕೆಲಸಗಳಲ್ಲಿ ತೊಡಗಿಸಿಕೊಂಡು ಅವರ ಸುಂದರ ಬದುಕಿಗೆ ಭದ್ರ ಬುನಾದಿಯನ್ನು ಕಲ್ಪಿಸಿಕೊಡುವುದು ಈ ಕಾರ್ಯಕ್ರಮದ ಉದ್ದೇಶ.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಆನ್‍ಲೈನ್ ಸ್ಫರ್ಧೆಗಳ ಮುಖ್ಯ ಸಂಯೋಜಕ ಮತ್ತು ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಕಾರ್ತಿಕ್‍ಕುಮಾರ್ ಅತಿಥಿಗಳನ್ನು ಸ್ವಾಗತಿಸಿ ಜೀವಶಾಸ್ತ್ರ ವಿಭಾಗದ ಉಪನ್ಯಾಸಕ ಸುಪ್ರೀತ್ ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸ್ನೇಹ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

7 hours ago

ಹಬ್ಬದ ಬೇಡಿಕೆಯನ್ನೇ ಕೃಷಿ ಅವಕಾಶವನ್ನಾಗಿ ಮಾಡಿದ ಕೇರಳ : 2.52 ಲಕ್ಷ ಟನ್ ತರಕಾರಿ ಉತ್ಪಾದನೆ

ಓಣಂ ಹಬ್ಬದ ಸಂದರ್ಭದ ಹೆಚ್ಚಿದ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಕೇರಳ ಕೃಷಿ ಇಲಾಖೆ ನಡೆಸಿದ…

14 hours ago

ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನವೂ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದ್ದು,…

16 hours ago

ಅಡಿಕೆ ತೋಟಗಳು ಹೆಚ್ಚುತ್ತಿವೆ… ಹಾಗಿದ್ದರೆ ಕರ್ನಾಟಕದಲ್ಲಿ ಇಳುವರಿ ಏಕೆ ಕುಸಿಯುತ್ತಿದೆ?

ಕರ್ನಾಟಕದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಳೆದ ಐದು ವರ್ಷಗಳಲ್ಲಿ ಶೇ.32.42ರಷ್ಟು ಹೆಚ್ಚಾದರೂ, ಉತ್ಪಾದನೆ…

16 hours ago

ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯವೇ ದೊಡ್ಡ ಶಕ್ತಿಮೂಲ

ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…

1 day ago