2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ಉತ್ತೀರ್ಣರಾಗಿ, ಮುಂದಿನ ಹಂತವಾದ ದೈಹಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ, ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSಃ) ನಡೆಸುವ ಮೌಖಿಕ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಇವರು ಚಿನ್ನಾಲಪಟ್ಟಿಯ ಪಿ. ಮುರುಗನ್ ಮತ್ತು ರೇಣುಕಾ ಎಂ ದಂಪತಿಗಳ ಪುತ್ರ. ರಾಷ್ಟ್ರಮಟ್ಟದಲ್ಲಿ ಈ ಸಂದರ್ಶನಕ್ಕೆ ಆಯ್ಕೆಯಾಗುವ ಕೇವಲ 900 ವಿದ್ಯಾರ್ಥಿಗಳಲ್ಲಿ ಇವರೊಬ್ಬರಾಗಿರುವುದು ಗಮನಾರ್ಹ ಅಂಶ.
ತಿಯಾನಂದ್ ಎಂ.ರವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಕೋಚಿಂಗ್ ಸೆಲ್ ನಡೆಸುವ ತರಗತಿಗಳಲ್ಲಿ ತರಬೇತಿ ಪಡೆದಿದ್ದರು. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಸಾಮಾನ್ಯ ಅರ್ಹತಾ ಪ್ರಶ್ನೆಗಳು ಮತ್ತು ಗಣಿತಶಾಸ್ತ್ರ ಪ್ರಶ್ನೆಗಳನ್ನು ಒಳಗೊಂಡಿತ್ತು.
ವಿದ್ಯಾರ್ಥಿಯ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…