2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ಉತ್ತೀರ್ಣರಾಗಿ, ಮುಂದಿನ ಹಂತವಾದ ದೈಹಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ, ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSಃ) ನಡೆಸುವ ಮೌಖಿಕ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಇವರು ಚಿನ್ನಾಲಪಟ್ಟಿಯ ಪಿ. ಮುರುಗನ್ ಮತ್ತು ರೇಣುಕಾ ಎಂ ದಂಪತಿಗಳ ಪುತ್ರ. ರಾಷ್ಟ್ರಮಟ್ಟದಲ್ಲಿ ಈ ಸಂದರ್ಶನಕ್ಕೆ ಆಯ್ಕೆಯಾಗುವ ಕೇವಲ 900 ವಿದ್ಯಾರ್ಥಿಗಳಲ್ಲಿ ಇವರೊಬ್ಬರಾಗಿರುವುದು ಗಮನಾರ್ಹ ಅಂಶ.
ತಿಯಾನಂದ್ ಎಂ.ರವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಕೋಚಿಂಗ್ ಸೆಲ್ ನಡೆಸುವ ತರಗತಿಗಳಲ್ಲಿ ತರಬೇತಿ ಪಡೆದಿದ್ದರು. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಸಾಮಾನ್ಯ ಅರ್ಹತಾ ಪ್ರಶ್ನೆಗಳು ಮತ್ತು ಗಣಿತಶಾಸ್ತ್ರ ಪ್ರಶ್ನೆಗಳನ್ನು ಒಳಗೊಂಡಿತ್ತು.
ವಿದ್ಯಾರ್ಥಿಯ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…