ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮ

October 20, 2020
11:08 AM

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು.

Advertisement

ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು ದಿನಂಪ್ರತಿ ಮಾಡಬೇಕು.ಇದರಿಂದ ಏಕಾಗ್ರತೆ ಬರುವುದರೊಂದಿಗೆ ಮನಸ್ಸನ್ನು ತಿಳಿಯಾಗಿರಿಸಲು ಸಾಧ್ಯ. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಯೋಗ ಸಂಸ್ಕೃತಿಯನ್ನು ಜಾಗೃತ ಪಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ಉಪನ್ಯಾಸಕರಿಗೆ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸಂಸ್ಕೃತ ವಿಭಾಗದ ಉಪನ್ಯಾಸಕ ಜಯಗೋವಿಂದ ಶರ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು ಮೂರು ದಿನ ಕಾಲೇಜಿನ ಸಭಾಂಗಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮವು ನಡೆಯಲಿದೆ.

 

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ
ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ
July 19, 2025
9:22 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ
July 19, 2025
9:03 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group