ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು ದಿನಂಪ್ರತಿ ಮಾಡಬೇಕು.ಇದರಿಂದ ಏಕಾಗ್ರತೆ ಬರುವುದರೊಂದಿಗೆ ಮನಸ್ಸನ್ನು ತಿಳಿಯಾಗಿರಿಸಲು ಸಾಧ್ಯ. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಯೋಗ ಸಂಸ್ಕೃತಿಯನ್ನು ಜಾಗೃತ ಪಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಂತರ ಉಪನ್ಯಾಸಕರಿಗೆ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸಂಸ್ಕೃತ ವಿಭಾಗದ ಉಪನ್ಯಾಸಕ ಜಯಗೋವಿಂದ ಶರ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು ಮೂರು ದಿನ ಕಾಲೇಜಿನ ಸಭಾಂಗಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮವು ನಡೆಯಲಿದೆ.
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…
ರಸ್ತೆ ಬದಿ ತ್ಯಾಜ್ಯ ಎಸೆದ ಪ್ರಕರಣದಲ್ಲಿ ಅಂಗಡಿ ಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.…