Advertisement
ಸುದ್ದಿಗಳು

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮ

Share

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು ದಿನಂಪ್ರತಿ ಮಾಡಬೇಕು.ಇದರಿಂದ ಏಕಾಗ್ರತೆ ಬರುವುದರೊಂದಿಗೆ ಮನಸ್ಸನ್ನು ತಿಳಿಯಾಗಿರಿಸಲು ಸಾಧ್ಯ. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಯೋಗ ಸಂಸ್ಕೃತಿಯನ್ನು ಜಾಗೃತ ಪಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ನಂತರ ಉಪನ್ಯಾಸಕರಿಗೆ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸಂಸ್ಕೃತ ವಿಭಾಗದ ಉಪನ್ಯಾಸಕ ಜಯಗೋವಿಂದ ಶರ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು ಮೂರು ದಿನ ಕಾಲೇಜಿನ ಸಭಾಂಗಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮವು ನಡೆಯಲಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕ್ಯಾಂಪ್ಕೋ ಅಭಿವೃದ್ಧಿಯ ಹಾದಿಯಲ್ಲಿ: ₹2,900 ಕೋಟಿ ಅಡಿಕೆ ವ್ಯವಹಾರದ ನಡುವೆ ಮುಂದಿರುವ ಸವಾಲುಗಳೇನು?

2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…

43 minutes ago

ಅಡಿಕೆಯಷ್ಟೇ ಅಲ್ಲ ಅದೇ ಮರಕ್ಕೆ ವೆನಿಲ್ಲಾ ಬಳ್ಳಿ | ಅಸ್ಸಾಂನಲ್ಲಿ ಅಡಿಕೆಯ ಜೊತೆಗೆ ಇನ್ನೊಂದು ಬೆಳೆ..

ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…

8 hours ago

ದೇಶಾದ್ಯಂತ ಮುಂಗಾರು ಬಿತ್ತನೆ 1,086 ಲಕ್ಷ ಹೆಕ್ಟೇರ್ ದಾಟಿದೆ – ಕರ್ನಾಟಕದಲ್ಲಿ ಭತ್ತ, ದ್ವಿದಳ ಧಾನ್ಯ ಕೃಷಿ ಕುಸಿತ

ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…

9 hours ago

ಜಾನುವಾರುಗಳ ಮೇವಿನ ಕೊರತೆಗೆ ಅಜೋಲಾ ಪರಿಹಾರ – ರಾಜ್ಯದಲ್ಲಿ 12 ಸಾವಿರ ಘಟಕಗಳ ಸ್ಥಾಪನೆಗೆ ಚಾಲನೆ

ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…

10 hours ago

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

16 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

22 hours ago