ಬೆಳ್ಳಾರೆಯಲ್ಲಿ “ವೇದಾಮೃತ ಆಯುರ್ವೇದ ಚಿಕಿತ್ಸಾಲಯ ” ಆರಂಭ |

October 12, 2022
8:57 PM

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಶುಭಾರಂಭಗೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನ. ಸೀತಾರಾಮ ಸೇರಿದಂತೆ ಹಲವು ಮಂದಿ ಪ್ರಮುಖರು ಭಾಗವಹಿಸಿದರು.

ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.

ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ
ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್
July 20, 2026
10:18 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ
July 19, 2026
10:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror