ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಶುಭಾರಂಭಗೊಂಡಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ನ. ಸೀತಾರಾಮ ಸೇರಿದಂತೆ ಹಲವು ಮಂದಿ ಪ್ರಮುಖರು ಭಾಗವಹಿಸಿದರು.
ಈ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದು.
ಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354)
ಉತ್ತರಾಖಂಡದ ಪ್ರಸಿದ್ಧ ಯಾತ್ರಾ ಕ್ಷೇತ್ರ ಬದರೀನಾಥ ಧಾಮವನ್ನು ತೆರೆಯಲಾಗಿದೆ. ಮುಂಜಾನೆ 6 ಗಂಟೆಯ…
ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದುಪಡಿಸಿ, ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ…
ಈ ಬಾರಿ ಅಡಿಕೆ ಮಾರುಕಟ್ಟೆಯಲ್ಲಿ ಏರಿಳಿತ, ಅಡಿಕೆ ಬೆಳೆ ಕಡಿಮೆ, ಧಾರಣೆ ಏರಿಕೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್…
ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ…